ಪಿಯುಸಿ ಪ್ರವೇಶಕ್ಕೂ ಬಂತು ಆಧಾರ್

ವಿದ್ಯಾರ್ಥಿಯ ಸಮಗ್ರ ಶೈಕ್ಷಣಿಕ ಸಾಧನೆ ಒಂದೆಡೆಗೆ ತರುವ ಉದ್ದೇಶದಿಂದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಆಧಾರ್ ಸಲ್ಲಿಸಲು ತಿಳಿಸಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷದಿಂದ ಪಿಯುಸಿ ಪ್ರವೇಶಕ್ಕೆ ಆಧಾರ್ ಕಡ್ಡಾಯ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.ಇಲಾಖೆಯ ಸೂಚನೆಯಂತೆ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಪ್ರವೇಶಕ್ಕೆ ಆಧಾರ್ ಕಡ್ಡಾಯ ಎಂಬ ಫಲಕಗಳನ್ನು ಹಾಕಿದ್ದು ಹಲವೆಡೆ ಗೊಂದಲವನ್ನು ಸೃಷ್ಠಿಸಿದೆ.

ಒಂದು ವೇಳೆ ಆಧಾರ್ ಕಾರ್ಡ್ ಇಲ್ಲದಿದ್ದರೆ ಆಧಾರ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ ಅದರ ರಶೀದಿ ಸಂಖ್ಯೆಯನ್ನಾದರೂ ಹೊಂದಬೇಕು ಎಂದು ಇಲಾಖೆಯು ತಿಳಿಸಿದೆ.

ಪ್ರವೇಶಾತಿ ನಮೂನೆಯಲ್ಲಿ ಆಧಾರ್ ಕಾಲಂ

ಹಲವು ಪಿಯು ಕಾಲೇಜುಗಳಲ್ಲಿ ನೀಡಲಾಗುತ್ತಿರುವ ಪ್ರವೇಶಾತಿ ನಮೂನೆಯಲ್ಲಿ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸುವಂತೆ ಸೂಚಿಸಲಾಗಿದ್ದು, ಅದಕ್ಕಾಗಿ ಹೊಸ ಕಾಲಂ ಕೂಡ ಸೇರ್ಪಡೆ ಮಾಡಲಾಗಿದೆ. ಅರ್ಜಿ ನಮೂನೆ ಜತೆಗೆ ಆಧಾರ್ ಕಾರ್ಡ್ ಸಲ್ಲಿಸದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಆಧಾರ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಿವೆ. ಸಲ್ಲಿಸಿದ ಅರ್ಜಿಯ ರಶೀದಿ ಸಂಖ್ಯೆ ನೀಡಿದರೆ ಪ್ರವೇಶಾತಿಗೆ ಅವಕಾಶ ನೀಡುವುದಾಗಿ ತಿಳಿಸಿವೆ.

ಪಿಯುಸಿಗೆ ಆಧಾರ್ ಕಡ್ಡಾಯ

ಆದರೆ, ಕೆಲವು ಕಾಲೇಜುಗಳಲ್ಲಿ ಜನ್ಮದಿನಾಂಕ, ವಿಳಾಸ ಸೇರಿ ಇತರ ವಿವರ ದೃಢೀಕರಿಸುವ ಯಾವುದಾದರೂ ದಾಖಲೆಗಳನ್ನು ಸಲ್ಲಿಸಬಹುದು ಎಂದು ಹೇಳುತ್ತಿವೆ.

ಆಧಾರ್ ಕಡ್ಡಾಯಕ್ಕೆ ಕಾರಣ

ವಿದ್ಯಾರ್ಥಿಯ ಸಮಗ್ರ ಶೈಕ್ಷಣಿಕ ಸಾಧನೆ ಒಂದೆಡೆಗೆ ತರುವ ಉದ್ದೇಶದಿಂದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಆಧಾರ್ ಸಲ್ಲಿಸಲು ತಿಳಿಸಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಿರೋಧ

ಆಧಾರ್ ಬಳಕೆ ಬಗ್ಗೆ ಇನ್ನೂ ಚರ್ಚೆಯಾಗುತ್ತಿರುವ ಸಮಯದಲ್ಲೇ ರಾಜ್ಯ ಶಿಕ್ಷಣ ಇಲಾಖೆ ಈಗ ವಿವಾದತ್ಮಕ ಆದೇಶವನ್ನು ಹೊರಡಿಸಿದೆ.

ಇದೇ ವೇಳೆ ಅರ್ಜಿ ನಮೂನೆ ಜತೆಗೆ ಆಧಾರ್ ಕಾರ್ಡ್ ಸಲ್ಲಿಸದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಆಧಾರ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದು ಕಾಲೇಜುಗಳ ನಡವಳಿಕೆಯು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಅಸಮಾಧಾನ ಮೂಡಿಸಿದೆ.

ಆಧಾರ್ ಕಾರ್ಡ್

ಆಧಾರ್ ಆಧಾರ್ ಸಂಖ್ಯೆಯು , ಪ್ರಾಧಿಕಾರದಿಂದ ನಿರ್ದಿಷ್ಟಪಡಿಸಲಾಗಿರುವ ಪರಿಶೀಲನಾ ಪ್ರಕ್ರಿಯೆಗಳು ತೃಪ್ತಿಕರವಾಗಿ ಪೂರ್ಣಗೊಂಡನಂತರ ಭಾವಿಗುಪ್ರಾವು ("ಪ್ರಾಧಿಕಾರ") ಭಾರತದ ನಿವಾಸಿಗಳಿಗೆ ನೀಡುವ 12 ಅಂಕೆಗಳ ಯಾದೃಚ್ಛಿಕ ಸಂಖ್ಯೆಯಾಗಿರುತ್ತದೆ.

ಆಧಾರ್ ಸಂಖ್ಯೆಯು ಯಾವುದೇ ಗುಪ್ತಚರ ಮಾಹಿತಿ ರಹಿತವಾಗಿರುತ್ತದೆ ಹಾಗೂ ಜಾತಿ, ಮತ, ಆದಾಯ, ಆರೋಗ್ಯ, ಭೌಗೋಳಿಕ ಆಧಾರದ ಮೇರೆಗೆ ಜನತೆಯ ಪಾರ್ಶ್ವಚಿತ್ರಣವನ್ನು ನೀಡುವುದಿಲ್ಲ. ಆಧಾರ್ ಸಂಖ್ಯೆಯು ಗುರುತಿನ ಒಂದು ಸಾಕ್ಷಾಧಾರವಾಗಿರುತ್ತದೆ, ಆದಾಗ್ಯೂ, ಅದು ಆಧಾರ್ ಸಂಖ್ಯೆಯನ್ನು ಹೊಂದಿರುವವರಿಗೆ ಸಂಬಂಧಿಸಿದಂತೆ ಅದು ನಾಗರಿಕತೆಯ ಹಕ್ಕನ್ನು ನೀಡುವುದಿಲ್ಲ.

For Quick Alerts
ALLOW NOTIFICATIONS  
For Daily Alerts

English summary
Karnataka's Department of Primary and Secondary Education has decided to make Aadhaar enrolment mandatory for all PU joining students.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X