ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್, ಇಂಜನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ,3ಎ,3ಬಿ ಪ.ಜಾ/ಪ.ವರ್ಗ ಅಭ್ಯರ್ಥಿಗಳು ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯದ ಮಿತಿ:
- ಪ್ರವರ್ಗ-1, ಪ.ಜಾ/ಪ.ವರ್ಗ ಅಭ್ಯರ್ಥಿಗಳಿಗೆ: ರೂ.2.50 ಲಕ್ಷ
- ಹಿಂದುಳಿದ ವರ್ಗ ಹಾಗೂ ಇತರೆ ಅಭ್ಯರ್ಥಿಗಳಿಗೆ ರೂ.1.00 ಲಕ್ಷ
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸದ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-08-2019
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ಸಂಪೂರ್ಣ ವಿವರಗಳಿಗೆ ಇಲಾಖೆಯ ವೆಬ್ಸೈಟ್ ಗಮನಿಸಿ
ಸಹಾಯವಾಣಿ: 080-8050370006
ಆನ್-ಲೈನ್ ಅರ್ಜಿ ವೇಳೆ ಸಲ್ಲಿಸಬೇಕಾದ ದಾಖಲೆಗಳು:
- ತಹಶೀಲ್ದಾರ/ಉಪತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ವಿದ್ಯಾಭ್ಯಾಸಕ್ಕಾಗಿ ಪಡೆದದಿರುವುದು)
- ಶಾಲಾ ಕಾಲೆಜುಗಳಿಂದ ಪಡೆದ ವರ್ಗಾವಣೆ ಪತ್ರ
- ಆಧಾರ್ ಕಾರ್ಡ್ ಅಥವಾ ಇ.ಐಡಿ ನಂಬರ್ ಪ್ರತಿ
- ಎಸ್ ಎಸ್ ಎಲ್ ಸಿ ಅಂಕಪಟ್ಟಿ ಮತ್ತು ಹಿಂದಿನ ತರಗತಿ/ಕೋರ್ಸುಗಳ ಅಂಕಪಟ್ಟಿ
- ಬ್ಯಾಂಕ್ ಪಾಸ್ ಬುಕ್ ಮೊದಲ ಪುಟದ ವಿವರಗಳ ಪ್ರತಿ
- ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಫೋಟೋ
- ವಾಸಸ್ಥಳ ದೃಢೀಕರಣ ಪತ್ರ.
ವಿದ್ಯಾರ್ಥಿಯು ಆನ್ಲೈನ್ ಅರ್ಜಿಯ ಪ್ರತಿ ಹಾಗೂ ಅಪ್ಲೋಡ್ ಮಾಡಲಾದ ದಾಖಲಾತಿಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ , ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ದಿನಾಂಕ 22.08.2019 ರೊಳಗೆ ಕಡ್ಡಾಯವಾಗಿ ಸಲ್ಲಿಸಿ, ಸ್ವೀಕೃತಿ ಪಡೆಯತಕ್ಕದ್ದು. ಒಂದು ವೇಳೆ ನಿಗದಿತ ದಿನಾಂಕದೊಳಗೆ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ, ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.
ವಿದ್ಯಾರ್ಥಿನಿಲಯಗಳಿಗೆ, ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ:
- ಅರ್ಹವಿರುವ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯು ತಾಲ್ಲೂಕಿನ ಹೆಚ್ಚಿನ ಭಾಗ ಪ್ರತಿನಿಧಿಸುವ ವಿಧಾನಸಭಾ ಸದಸ್ಯರು ಅಧ್ಯಕ್ಷರಾಗಿರುವ ಸಮಿತಿಯ ಮೂಲಕ ನಡೆಯುತ್ತದೆ.
- ವಿದ್ಯಾರ್ಥಿನಿಲಯದಲ್ಲಿ ಪ್ರವರ್ಗವಾರು, ಕೋರ್ಸುವಾರು ಲಭ್ಯವಿರುವ ಸೀಟುಗಳ ಆಧಾರದ ಮೇಲೆ ಹಾಗೂ ಅಂಕಗಳ ಆಧಾರದ ಮೇರೆಗೆ ಆಯ್ಕೆ ಮಾಡಿಕೊಳ್ಳಲಾಗುವುದು.
- ಆಯಾ ಜಿಲ್ಲೆಯ ಸ್ಥಳೀಯ ವಿದ್ಯಾರ್ಥಿಗಳಿಗೆ ಮೊದಲನೆ ಆದ್ಯತೆಯನ್ನು ನೀಡಲಾಗುವುದು.
- ಒಂದು ವೇಳೆ ವಿದ್ಯಾರ್ಥಿಯ ಅಂಕಗಳು ಸಮನಾಗಿದ್ದರೆ, ವಿದ್ಯಾರ್ಥಿಯ ಸ್ವಂತ ಸ್ಥಳದ ದೂರವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು.
- ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆಯಲು ಅರ್ಹವಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ದೊರಕದಿದ್ದಲ್ಲಿ, ಅರ್ಹತೆ ಆಧಾರದ ಮೇಲೆ ಹಾಗೂ ಅನುದಾನದ ಲಭ್ಯತೆಗೊಳಪಟ್ಟು ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಪರಿಗಣಿಸಲಾಗುವುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಗೆ ಇ-ಮೇಲ್ ಮೂಲಕ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಅಗತ್ಯ ದಾಖಲೆಯೊಂದಿಗೆ ಸಂಪರ್ಕಿಸಲು ಸೂಚಿಸಲಾಗಿದೆ.