2022-23ನೇ ಶೈಕ್ಷಣಿಕ ಸಾಲಿಗೆ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಫೆಬ್ರವರಿ 26,2022ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು.
ಪ್ರಸ್ತುತ (2022-23ನೇ ಸಾಲಿನಲ್ಲಿ) 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ತಾಲೂಕಿನ ಅರ್ಹ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಆನ್ಲೈನ್ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 24/1/2022 ರಿಂದ 9/2/2022ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ತದನಂತರ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ಫೆಬ್ರವರಿ 26ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ತಮ್ಮ ಪಾಲಕರು/ಪೋಷಕರು ಕೆಳಗೆ ನಮೂದಿಸಿರುವ ದಾಖಲಾತಿಯೊಂದಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು :
* ಎಸ್.ಟಿ.ಎಸ್.ನಂಬರ್ (SATS Number)
* ಮಗುವಿನ ಭಾವಚಿತ್ರ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ನಕಲು
* ಆಧಾರ್ ಕಾರ್ಡ್
ಆದರ್ಶ ವಿದ್ಯಾಲಯ :
ಕರ್ನಾಟಕ ರಾಜ್ಯದ 74 ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್ಗಳಲ್ಲಿ 74 ಆದರ್ಶ ವಿದ್ಯಾಲಯಗಳನ್ನು ನಡೆಸಲಾಗಗುತ್ತಿದೆ. ಈ ಶಾಲೆಗಳಲ್ಲಿ 6 ರಿಂದ 10ನೇ ತರಗತಿ ವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ನಡೆಯುತ್ತಿದೆ. ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿಗಳ ಸಮಗ್ರ ಹಾಗೂ ಬೌದ್ದಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಆದರ್ಶ ವಿದ್ಯಾಲಯಗಳ ಗುರಿಯಾಗಿದೆ.
2022-23ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ: ಶೀಘ್ರದಲ್ಲಿ ಪ್ರಕಟಿಸಲಾಗುವುದು
ಪ್ರವೆಶ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆಯುವ ದಿನಾಂಕ: ಶೀಘ್ರದಲ್ಲಿ ಪ್ರಕಟಿಸಲಾಗುವುದು
ಅರ್ಜಿ ಸಲ್ಲಿಸುವ ದಿನಾಂಕ: ದಿನಾಂಕ: 24/1/2022 ರಿಂದ 26/2/2022ರವರೆಗೆ
ಪ್ರವೇಶ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುತ್ತಿದ್ದು, ಮಕ್ಕಳು ಯಾವುದೇ ಶುಲ್ಕ ಪಾವತಿಸಬೇಕಾಗಿರುವುದಿಲ್ಲ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ http://www.schooleducation.kar.nic.in/ ಗೆ ಭೇಟಿ ನೀಡಿ.