ಕುವೆಂಪು ವಿಶ್ವವಿದ್ಯಾನಿಲಯ ದೂರ ಶಿಕ್ಷಣ ನಿರ್ದೇಶನಾಲಯದ 2019-20ನೇ ಸಾಲಿನ ಸ್ನಾತಕ/ಸ್ನಾತಕೋತ್ತರ/ಪಿಜಿ ಡಿಪ್ಲೊಮಾ ಪದವಿಗಳ ಪ್ರವೇಶಕ್ಕಾಗಿ ನಿಗದಿತ ನಮೂನೆಯಲ್ಲಿ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕುವೆಂಪು ವಿಶ್ವವಿದ್ಯಾನಿಲಯದ ಭೌಗೋಳಿಕ ವ್ಯಾಪ್ತಿಯ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ. ಪ್ರವೇಶ ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ. ದೂರಶಿಕ್ಷಣದ ಮೂಲಕ ಲಭ್ಯವಿರುವ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳ ವಿವರ ಇಲ್ಲಿದೆ.
ಸ್ನಾತಕೋತ್ತರ ಪದವಿಗಳ ವಿಷಯ (ಎರಡು ವರ್ಷಗಳು):
ಎಂ.ಎ ಕನ್ನಡ, ಇಂಗ್ಲಿಷ್, ಹಿಂದಿ, ಸಂಸ್ಕೃತ, ಉರ್ದು, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಶಿಕ್ಷಣ, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ
ಎಂ.ಎಸ್ಸಿ ವಿಷಯಗಳು (ಎರಡು ವರ್ಷಗಳು):
ಗಣಿತಶಾಸ್ತ್ರ, ಭೌತಶಾಸ್ತ್ರ, ರಾಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ,ಜೈವಿಕ ತಂತ್ರಜ್ಞಾನ,ಪರಿಸರ ವಿಜ್ಞಾನ
ಸ್ನಾತಕ ಪದವಿಗಳು (3 ವರ್ಷಗಳು):
ಬಿ.ಎ,ಬಿ.ಕಾಂ, ಬಿಬಿಎ, ಬಿ.ಎಸ್ಸಿ, ಬಿ.ಎಲ್.ಐ.ಎಸ್ಸಿ (1 ವರ್ಷ)
ಸ್ನಾತಕೋತ್ತರ ಡಿಪ್ಲೊಮಾ (1 ವರ್ಷ):
ಕನ್ನಡ ಕಂಪ್ಯೂಟರ್, ಕನ್ನಡ ಪತ್ರಿಕೋದ್ಯಮ, ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಟೂರಿಸಂ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್, ಇಂಡಸ್ಟ್ರೀಯಲ್ ಸೇಫ್ಟಿ
ವಾಣಿಜ್ಯ ವಿಷಯ (ಎರಡು ವರ್ಷಗಳು):
ಎಂ.ಕಾಂ, ಎಂಬಿಎ, ಎಂ.ಎಲ್.ಐ.ಎಸ್ಸಿ (1 ವರ್ಷ)
ದೇಶ/ವಿದೇಶದ ಯಾವುದೇ ಭಾಗಗಳಿಂದ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಕಂಡ ಸ್ಥಳಗಳಲ್ಲಿ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
* ದೂರ ಶಿಕ್ಷಣ ನಿರ್ದೇಶನಾಲಯ ಕಛೇರಿ, ಕುವೆಂಪು ವಿಶ್ವವಿದ್ಯಾನಿಲಯ, ಜ್ಞಾನ ಸಹ್ಯಾದ್ರಿ, ಶಂಕರಘಟ್ಟ-577451, ಶಿವಮೊಗ್ಗ ಜಿಲ್ಲೆ
* ಕುವೆಂಪು ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಛೇರಿ, ,ಸ್ನಾತಕೋತ್ತರ ಕೇಂದ್ರ, ಐ.ಡಿ.ಎಸ್.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣ, ಜ್ಯೋತಿ ನಗರ, ಚಿಕ್ಕಮಗಳೂರು-577102
* ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರ, ಕಡೂರು-577548
ಅರ್ಜಿ ಸಲ್ಲಿಸಲು ಕೊನೆಯ ದಿನ: 10/7/2019
ವಿಳಂಬ ಶುಲ್ಕ 200/-ರೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ:10/8/2019
ವಿಳಂಬ ಶುಲ್ಕ 400/-ರೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ: 31/8/2019
ಮಂಗಳೂರು ವಿಶ್ವವಿದ್ಯಾನಿಲಯ 2019-20ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಅಧ್ಯಯನ ಸಾಮಾಗ್ರಿ, ಪ್ರಾಕ್ಟಿಕಲ್ ರೆಕಾರ್ಡ್ಸ್, ಅಸೈನ್ಮೆಂಟ್ ಪುಸ್ತಕಗಳನ್ನು ಸಂಬಂಧಪಟ್ಟ ಕೋರ್ಸ್ ಗೆ ಪ್ರವೇಶ ಪಡೆದ ದಿನವೇ ನಿರ್ದೇಶನಾಲಯದಿಂದ ವಿತರಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 08282-256450,256246 ಮತ್ತು ಅಭ್ಯರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಅಥವಾ ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಪ್ರವೇಶಾತಿಯ ಪ್ರಕಟಣೆಯನ್ನು ವೀಕ್ಷಿಸಲು ಮುಂದೆ ನೋಡಿ.
ಕುವೆಂಪು ವಿಶ್ವವಿದ್ಯಾನಿಲಯ:
ಕರ್ನಾಟಕ ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯಗಳಲ್ಲಿ ಒಂದು. ಇದರ ಧ್ಯೇಯವಾಕ್ಯ ವಿಶ್ವಮಾನವ ಪರಿಕಲ್ಪನೆಯನ್ನು ಒಳಗೊಂಡಿದೆ. ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಠಿ ಎಂಬ ಮಾತುಗಳೊಂದಿಗೆ ಲಾಂಛನವನ್ನು ಮಾಡಲಾಗಿದೆ.
ದೂರ ಶಿಕ್ಷಣ ಸೇವೆ :
2003 ನೇ ಇಸವಿಯಿಂದ ದೂರು ಶಿಕ್ಷಣ ಸೇವೆ ಆರಂಭಿಸಿದ್ದು ಇಲ್ಲಿಯವರೆಗೂ ಸಾವಿರಾರು ವಿದ್ಯಾರ್ಥಿಗಳಿಗೆ ದೂರ ಶಿಕ್ಷಣ ಮೂಲಕ ಶಿಕ್ಷಣ ನೀಡುತ್ತಾ ಬಂದಿದೆ. ಪದವಿ, ಸ್ನಾತಕ ಪದವಿ ಮತ್ತು ಡಿಪ್ಲೊಮಾ ಕೋರ್ಸುಗಳಲ್ಲಿ ಶಿಕ್ಷಣವನ್ನು ಕಲ್ಪಿಸಲಾಗುತ್ತಿದೆ.