ಕರ್ನಾಟಕ ಪೊಲೀಸ್ ಇಲಾಖೆಯವರು ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ (ಪುರುಷ & ಮಹಿಳಾ) 1313 (ಹೈ-ಕ) ಹುದ್ದೆಯ ದೈಹಿಕ ಪರೀಕ್ಷೆಯ ಹಾಲ್ ಟಿಕೇಟ್ ಅನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಕೆ ಎಸ್ ಸಿ ಎ ಆರ್ ಡಿ ಬ್ಯಾಂಕ್: ವಿವಿಧ ಹುದ್ದೆಗಳ ನೇಮಕಾತಿ
ಕರೆ ಪತ್ರದಲ್ಲಿ ನಿಗದಿಯಾದಂತೆ ದೈಹಿಕ ಪರೀಕ್ಷೆಯು ಬೀದರ್, ಕೊಪ್ಪಳ, ಯಾದಗಿರಿ, ರಾಯಚೂರು ಮತ್ತು ಬೆಂಗಳೂರಿನಲ್ಲಿ ಮಾತ್ರ ನಡೆಯಲಿದ್ದು, ಅಭ್ಯರ್ಥಿಗಳು ಕರೆ ಪತ್ರದೊಂದಿಗೆ ಹಾಜರಾಗಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ಮೂಲಕ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಕರೆಪತ್ರ ಡೌನ್ಲೋಡ್ ಮಾಡಿಕೊಳ್ಳುವ ವಿಧಾನ
- ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ My Application ನ್ನು ಕ್ಲಿಕ್ ಮಾಡಿ
- ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
- ಕರೆ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ
ಅಭ್ಯರ್ಥಿಗಳಿಗೆ ಕರೆ ಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ಮೂಲಕವೇ ಪಡೆಯಬೇಕು. ಕರೆ ಪತ್ರವಿಲ್ಲದೆ ಹಾಜರಾಗುವ ಅಭ್ಯರ್ಥಿಗಳಿಗೆ ಪರಿಕ್ಷೆಗೆ ಅನುವು ಮಾಡಲಾಗುವುದಿಲ್ಲ.
ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್.(AADHAR CARD) ಕರೆಪತ್ರದ ಜೊತೆಗೆ ಆನ್-ಲೈನ್ ಅರ್ಜಿಯ ಜೆರಾಕ್ಸ್ ಪ್ರತಿಯನ್ನು ಸಹ ತರತಕ್ಕದ್ದು, ತಪ್ಪಿದ್ದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಹಾಜರಾಗದಿದ್ದರೆ ಅಂತಹವರನ್ನು ಅನರ್ಹ ಗೊಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ