ಕರ್ನಾಟಕ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯನ್ನು ಜೂನ್ 27 ರಿಂದ ನಡೆಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಿಸಿದ್ದಾರೆ. ಈ ಕುರಿತು ಅಧಿಸೂಚನೆಯನ್ನು ಕೂಡ ಪ್ರಕಟ ಮಾಡಲಾಗಿದೆ.
2021-22ನೇ ಸಾಲಿನಲ್ಲಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡು ಹಾಜರಾಗದ ಮತ್ತು ಗೈರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2002-03 ರಿಂದ 2021-22ರ ಮುಖ್ಯ ಪರೀಕ್ಷೆವರೆಗೆ ಮತ್ತು 2002-03ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಈ ಪೂರಕ ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಪಾವತಿಸಬೇಕಾದ ಪರೀಕ್ಷಾ ಶುಲ್ಕಗಳ ವಿವರ :
ಒಂದು ವಿಷಯಕ್ಕೆ 370/-ರೂ
ಎರಡು ವಿಷಯಕ್ಕೆ 461/-ರೂ
ಮೂರು ಅಥವಾ ಮೂರಕ್ಕಿಂತ ಮೇಲ್ಪಟ್ಟು 620/-ರೂ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಮಾತ್ರ ಪೂರಕ ಪರೀಕ್ಷೆಯ ಪರೀಕ್ಷಾ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿರುತ್ತದೆ.
ಆನ್ಲೈನ್ ಪರೀಕ್ಷಾ ಅರ್ಜಿ ಹಾಗೂ ಎನ್ಇಎಫ್ಟಿ ಮೂಲಕ ಪರೀಕ್ಷಾ ಶುಲ್ಕ ಪಾವತಿಗೆ ದಿನಾಂಕಗಳು :
ಆನ್ಲೈನ್ ಮೂಲಕ ಮಾಹಿತಿ ಭರ್ತಿ ಮಾಡಲು ಆರಂಭ ದಿನಾಂಕ : ಮೇ 20,2022
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : ಮೇ 30,2022
ಆನ್ಲೈನ್ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ನಿಗದಿಪಡಿಸಿದ ದಿನಾಂಕ : ಮೇ 31 ರಿಂದ ಜೂನ್ 2,2022
ಬ್ಯಾಂಕ್ ಗೆ ಜಮೆ ಮಾಡಲು ನಿಗದಿಪಡಿಸಿದ ದಿನಾಂಕ : ಮೇ 31 ರಿಂದ ಜೂನ್ 3
೨೦೦೨ ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ನೆಫ್ಟ್ ಚಲನ್ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಾವತಿಸಲು ಅಂತಿಮ ದಿನಾಂಕ : ಜೂನ್ 3,2022
ದಾಖಲೆಗಳನ್ನು ಮಂಡಳಿಗೆ ಸಲ್ಲಿಸಲು ನಿಗಧಿಪಡಿಸಿದ ಅಂತಿಮ ದಿನಾಂಕ : ಜೂನ್ 8,2022
ಖಾಸಗಿ ಅಭ್ಯರ್ಥಿಗಳು ಪ್ರಥಮ ಬಾರಿಗೆ ಈ ಪರೀಕ್ಷೆ ತೆಗೆದುಕೊಳ್ಳಲು ಅರ್ಹರಲ್ಲ. ಮಾರ್ಚ್/ಏಪ್ರಿಲ್-2022ರ ಪರೀಕ್ಷೆಗೆ ಶುಲ್ಕ ಪಾವತಿಸಿ ಪ್ರವೇಶ ಪತ್ರ ಪಡೆದು ಅನಾರೋಗ್ಯ, ಅಪಘಾತದಿಂದ ಆಸ್ಪತ್ರೆಗೆ ಚಿಕಿತ್ಸೆಗೊಳಗಾಗಿ ದಾಖಲಾದ ಪ್ರಕರಣಗಳಲ್ಲಿ ಮತ್ತು ಇನ್ನಿತರೆ ಕಾರಣಗಳಿಂದ ಆ ಪರೀಕ್ಷೆಯನ್ನು ತೆಗೆದುಕೊಳ್ಳದ ವಿದ್ಯಾರ್ಥಿಗಳು ಜೂನ್ 2022ರ ಪೂರಕ ಪರೀಕ್ಷೆಗೆ ನಿಗಧಿತ ಪರೀಕ್ಷಾ ಶುಲ್ಕ ಪಾವತಿಸಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.
ವಿದ್ಯಾರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.