ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು, ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಿದೆ. ಕೊರೋನಾದಿಂದಾಗಿ ಮುಂದೂಡಲಾಗಿದ್ದ ಟಿಇಟಿ ಪರೀಕ್ಷೆಯನ್ನು ಜುಲೈ 5ರಂದು ನಡೆಸುವುದಾಗಿ ಟ್ವೀಟ್ ಮೂಲಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಅಲ್ಲದೇ ಅರ್ಜಿ ಸಲ್ಲಿಸದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಹ ತಿಳಿಸಿದ್ದಾರೆ.
ಕೆಟಿಇಟಿ 2020ರ ಪರೀಕ್ಷೆಯನ್ನು ಮಾರ್ಚ್ 15 ರಂದು ಎರಡು ಸೆಷನ್ಗಳಲ್ಲಿ ನಡೆಸುವುದಾಗಿ ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಕೊರೊನಾ ಹರಡುವಿಕೆ ಸಮಸ್ಯೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರಸ್ತುತ ಶಿಕ್ಷಣ ಸಚಿವರೇ ಅಧಿಕೃತವಾಗಿ ಟ್ವೀಟ್ ಮೂಲಕ ಹೊಸ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದ್ದಾರೆ.
ಈ ಹಿಂದೆ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಕರ್ನಾಟಕ ಶಿಕ್ಷಕರ ಅರ್ಹತೆ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಿಸ್ ಮಾಡಿಕೊಂಡಿದ್ದ ಅಭ್ಯರ್ಥಿಗಳು http://www.schooleducation.kar.nic.in ಗೆ ಭೇಟಿ ನೀಡಿ, ಹೊಸದಾಗಿ ಮತ್ತೊಮ್ಮೆ ಅರ್ಜಿ ಸಲ್ಲಿಸಬಹುದು.ಈಗಾಗಲೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು.