ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರು ಇಲ್ಲಿ ಖಾಲಿ ಇರುವ 17 ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ನವೆಂಬರ್ 4,2022 ಜನವರಿ 9,2023ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ :
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಎಂ.ಎಸ್ಸಿ, ಪಿಹೆಚ್.ಡಿ, ಸ್ನಾತಕೋತ್ತರ ಪದವಿ, ಎಂ.ಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ :
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವೇತನ :
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ, ಓಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 100/-ರೂ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳು 40/-ರೂ ಅರ್ಜಿ ಶುಲ್ಕವನ್ನು ನೆಫ್ಟ್ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ :
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ಅಧಿಕೃತ ವೆಬ್ಸೈಟ್ https://aiishmysore.in/en/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ನವೆಂಬರ್ 4,2022 ಜನವರಿ 9,2023ರ ಸಂಜೆ 5:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.
ಕಛೇರಿ ವಿಳಾಸ:
ಮುಖ್ಯ ಆಡಳಿತಾಧಿಕಾರಿ,
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ,
ಮಾನಸಗಂಗೋತ್ರಿ, ಮೈಸೂರು-570006
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ಪರಿಚಯ:
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ಬಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವಾಲಯದಡಿಯಲ್ಲಿ 1965ರಲ್ಲಿ ಸ್ಥಾಪಿಸಲ್ಪಟ್ಟಿತು.ಇದು ಪೂರ್ಣ ಪ್ರಮಾಣದ ಅನುದಾನದಲ್ಲಿ ಪಡೆದಿದ್ದು ಸ್ವಯಂಶಾಸನವನ್ನು ಹೊಂದಿರುವ ಒಂದು ವಿಶೇಷ ಸಂಸ್ಥೆಯಾಗಿದೆ. ಈ ಸಂಸ್ಥೆಯ ಮುಖ್ಯ ಉದ್ದೇಶವೆಂದರೆ ವೃತ್ತಿಪರ ತರಬೇತಿ ನೀಡುವುದು, ರೋಗಿಗಳಿಗೆ ಅವಶ್ಯ ಸೇವೆ ಒದಗಿಸುವುದು ಸಂಶೋಧನೆ ಮಾಡುವುದು ಹಾಗೂ ಸಫಲ ಸಂವಹನಕ್ಕೆ ತಡೆಯುಂಟು ಮಾಡುವ ತೊಂದರೆಗಳಾದ ಶ್ರವಣದೋಷ, ಬುದ್ಧಿಮಾಂದ್ಯತೆ, ಧ್ವನಿ, ತಡೆಯಿಲ್ಲದೆ ಮಾತನಾಡುವ ಮತ್ತು ಶಬ್ದಗಳು ಹಾಗೂ ಭಾಷೆಯ ಬಗ್ಗೆ ಜನರಲ್ಲಿ ಅರಿವುಂಟು ಮಾಡಿಸುವುದಾಗಿದೆ. ಈ ಸಂಸ್ಥೆಯು 1965 ರಲ್ಲಿ ಒಂದು ವಿಷಯದಲ್ಲಿ ಸ್ನಾತಕೋತ್ತರ ಪದವಿಯಿಂದ ಪ್ರಾರಂಭಿಸಲ್ಪಟ್ಟು ಈಗ ವಿಸ್ತರಣೆಗೊಂಡಿದ್ದು ಹಲವಾರು ಶೈಕ್ಷಣಿಕ ಕಾರ್ಯಕ್ರಮಗಳನ್ನು ನೀಡುತ್ತಿದೆ.
ಮೈಸೂರು ವಿಶ್ವವಿದ್ಯಾಲಯ, ಮಾನಸಗಂಗೋತ್ರಿ, ಮೈಸೂರು - ಈ ಸಂಸ್ಥೆಯು ಏಷ್ಯಾ ಉಪಖಂಡದಲ್ಲೇ ಒಂದು ಸರಿಸಾಟಿ ಇಲ್ಲದ ಸಂಸ್ಥೆ. ಇಲ್ಲಿ 11 ಪ್ರತ್ಯೇಕ ವಿಭಾಗಗಳಿದ್ದು, ಸುಸಜ್ಜಿತವಾದ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವಿದೆ. ವಿದ್ಯಾರ್ಥಿಗಳಿಗೆ ಅಗತ್ಯ ಸುಶಿಕ್ಷಣವನ್ನು ನೀಡಲು ಬೇಕಾದ ಸಲಕರಣೆಗಳನ್ನು ಪ್ರತಿ ಪ್ರತ್ಯೇಕ ವಿಭಾಗಗಳಿಗೂ ಹೊಂದಿವೆ. ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯು ಸಂವಹನ ನ್ಯೂನತೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಯಸ್ಸಿನ ತನ್ನ ಕಕ್ಷಿದಾರರ ಅಗತ್ಯೆಗಳಿಗೆ ಸ್ಪಂದಿಸುತ್ತದೆ.ಈ ಸಂಸ್ಥೆಯು ಭಾರತದ ವಿವಿಧ ಭಾಗಗಳಿಂದ ಮತ್ತು ಪ್ರಪಂಚದ ಎಲ್ಲೆಡಗಳಿಂದ ವಿದ್ಯಾರ್ಥಿಗಳನ್ನು ತನ್ನೆಡೆಗೆ ಆಕರ್ಷಿಸುತ್ತಿದೆ.ಕಳೆದ 43 ವರ್ಷಗಳಲ್ಲಿ ಶ್ರವಣ ದೋಷ ಮತ್ತು ಮಾತಿನ ತೊಂದರೆಗಳ ರೋಗನಿವಾರಣಾ ತಂತ್ರಗಳು ಹಾಗೂ ಅವುಗಳ ವಿಶೇಷ ವಿದ್ಯಾಭ್ಯಾಸವನ್ನು ಕುರಿತಂತೆ ಇನ್ನೂ ಹೆಚ್ಚಾಗಿ ವಿಶೇಷ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಹನ ನ್ಯೂನತೆಗಳಿಂದ ಬಳಲುತ್ತಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪಲು ಸಂಸ್ಥೆಗೆ ಇರುವ ಉತ್ಸಾಹಕ್ಕೆ ಯಾವ ಎಲ್ಲೆಯೂ ಇಲ್ಲ.ವಿಶ್ವ ಆರೋಗ್ಯ ಸಂಸ್ಥೆಯಿಂದ 'ಶ್ರವಣ ದೋಷದ ಕ್ಷೇತ್ರದಲ್ಲಿ ಬಹಳ ಅತ್ಯುತ್ತಮವಾದ ಕೇಂದ್ರ' ವೆಂದೂ, ಯು. ಜಿ. ಸಿ. ಯಿಂದ 'ಮುಂದುವರಿದ ಸಂಶೋಧನಾ ಕೇಂದ್ರ'ವೆಂದೂ ಮತ್ತು ಡಿ.ಎಸ್.ಟಿ ಯಿಂದ 'ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ' ಎಂದೂ ಗುರುತಿಸಪಟ್ಟಿದೆ.
ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯು, ಈ ಸಂಸ್ಥೆಯನ್ನು ಶ್ರವಣದೋಷವನ್ನು ತಡೆಗಟ್ಟಲು ಮತ್ತು ನಿಯಂತ್ರಣದಲ್ಲಿಡುವ ರಾಷ್ಟ್ರೀಯ ಕಾರ್ಯಕ್ರಮದ ಕೇಂದ್ರಸ್ಥಾನವೆಂದು ಹಾಗೂ ಈ ದಿಸೆಯಲ್ಲಿ ಕೆಲಸ ಮಾಡಲು ಬೇಕಾಗುವಂತಹ ನುರಿತ ಪರಿಣಿತರನ್ನು ಒದಗಿಸುವ ಕೇಂದ್ರ ಎಂದು ಗುರುತಿಸಲ್ಪಟ್ಟಿದೆ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











