ಬೆಂಗಳೂರು ನಗರ ಜಿಲ್ಲೆಯಲ್ಲಿ 2021-22ನೇ ಸಾಲಿಗೆ ಎನ್ಹೆಚ್ಎಂ ಯೋಜನೆಯ ವಿವಿಧ ಕಾರ್ಯಕ್ರಮದಡಿಯಲ್ಲಿ 11 ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಕ್ಟೋಬರ್ 12ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಇಲಾಖೆಯಲ್ಲಿ 2 ಪೀಡಿಯಾಟ್ರಿಶಿಯನ್, 3 ಸಿವಿಲ್ ಇಂಜಿನಿಯರ್, 3 ಬಯೋ ಮೆಡಿಕಲ್ ಇಂಜಿನಿಯರ್, 1 ಡೆಂಟಲ್ ಹೈಜಿನಿಸ್ಟ್ ಮತ್ತು 2 ಫಾರ್ಮಾಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ವಿದ್ಯಾರ್ಹತೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಪೀಡಿಯಾಟ್ರಿಶಿಯನ್ ಹುದ್ದೆಗಳಿಗೆ ಡಿಎಂ, ಎಂಡಿ, ಡಿಎನ್ಬಿ, ಸಿವಿಲ್ ಇಂಜಿನಿಯರ್, ಬಯೋ ಮೆಡಿಕಲ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಡೆಂಟಲ್ ಹೈಜೀನಿಸ್ಟ್ ಹುದ್ದೆಗಳಿಗೆ ಡಿಪ್ಲೋಮಾ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಡಿ. ಫಾರ್ಮಾ/ಬಿ.ಫಾರ್ಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಪೀಡಿಯಾಟ್ರಿಶಿಯನ್ ಹುದ್ದೆಗಳಿಗೆ ಗರಿಷ್ಟ 60 ವರ್ಷ, ಸಿವಿಲ್ ಇಂಜಿನಿಯರ್, ಬಯೋ ಮೆಡಿಕಲ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 45 ವರ್ಷ, ಡೆಂಟಲ್ ಹೈಜೀನಿಸ್ಟ್ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಪೀಡಿಯಾಟ್ರಿಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,10,000/-ರೂ, ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ, ಬಯೋ ಮೆಡಿಕಲ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ, ಡೆಂಟಲ್ ಹೈಜೀನಿಸ್ಟ್ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ
15,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮೆರಿಟ್ ಅನ್ವಯ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಕ್ಟೋಬರ್ 12,2021 ಗಂಟೆಗೆ ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ ಹಾಜರಾಗಬಹುದು.
ಕಚೇರಿ ವಿಳಾಸ:
ಜಿಲ್ಲಾ ಆರ್.ಸಿ. ಹೆಚ್ ಅಧಿಕಾರಿ ಕಚೇರಿ,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣ,
ಹಳೇ ಟಿ.ಬಿ ಆಸ್ಪತ್ರೆ,
ಹಳೇ ಮದ್ರಾಸ್ ರಸ್ತೆ,
ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಹತ್ತಿರ,
ಇಂದಿರಾನಗರ,
ಬೆಂಗಳೂರು-38.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.