ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 1ಶೀಘ್ರಲಿಪಿಗಾರ ,11 ಬೆರಳಚ್ಚುಗಾರ, 1 ಬೆರಳಚ್ಚು ನಕಲುಗಾರರು, 13 ಆದೇಶ ಜಾರಿಕಾರರ ಮತ್ತು 5 ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ 16.01.2019 ರಿಂದ ದಿನಾಂಕ 14.02.2019 ರ ರಾತ್ರಿ 11:59 ರವರೆಗೆ ಮಾತ್ರ ಸಲ್ಲಿಸತಕ್ಕದ್ದು.
CRITERIA | DETAILS |
Name Of The Posts | ಶೀಘ್ರಲಿಪಿಗಾರ ,ಬೆರಳಚ್ಚುಗಾರ, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರ ಮತ್ತು ಜವಾನರು |
Organisation | ಜಿಲ್ಲಾ ನ್ಯಾಯಾಲಯ |
Educational Qualification | ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಅರ್ಹತೆ,7ನೇ ತರಗತಿ |
Job Location | ಧಾರವಾಡ |
Salary Scale | ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ, ಆದೇಶ ಜಾರಿಕಾರಿಗೆ 19,950/- ರಿಂದ 37,900/-ರೂ, ಜವಾನ ಹುದ್ದೆಗಳಿಗೆ 17,000/- ರಿಂದ 28,950/-ರೂ ಮತ್ತು ಇತರೆ ಭತ್ಯೆಗಳು |
ದಾವಣಗೆರೆ ಜಿಲ್ಲಾ ನ್ಯಾಯಾಲಯ ನೇಮಕಾತಿ 28 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರತಕ್ಕದ್ದು.
ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಲ್ಲಿ ಅಜರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರತಕ್ಕದ್ದು.
ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳೀಯು ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಜ್ಯೂನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರತಕ್ಕದ್ದು.
ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು (ಲಘು/ಭಾರಿ ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು).
ಜವಾನ ಹುದ್ದೆಗೆ 7 ನೇ ತರಗತಿಯ ಪರೀಕ್ಷೆಯಲ್ಲಿ ಗಳಿಸಿರುವ ಗರಿಷ್ಟ ಅಂಕಗಳ ಅರ್ಹತೆಯ ಆಧಾರದ ಮೇಲೆ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಶೀಘ್ರಲಿಪಿಗಾರರು: 01 ಹುದ್ದೆ
ಹುದ್ದೆಗಳ ವರ್ಗೀಕರಣ:
ಮೀಸಲಾತಿ | ಒಟ್ಟು | |
ಸಾಮಾನ್ಯ ಅಭ್ಯರ್ಥಿ | 01 | 01 |
ಒಟ್ಟು | 01 | 01 |
ಬೆರಳಚ್ಚುಗಾರ: 11 ಹುದ್ದೆಗಳು
ಹುದ್ದೆಗಳ ವರ್ಗೀಕರಣ:
ಮೀಸಲಾತಿ | ಇತರೆ | ಗ್ರಾಮೀಣ | ಮಾ.ಸೈ | ಅಂ.ಅ | ಒಟ್ಟು |
ಪರಿಶಿಷ್ಟ ಜಾತಿ | - | 01* | 01* | - | 02 |
ಪರಿಶಿಷ್ಟ ಜಾತಿ | - | 01 | - | - | 01 |
ಪ್ರವರ್ಗ-1 | 01 | - | - | - | 01 |
ಸಾಮಾನ್ಯ ಅಭ್ಯರ್ಥಿ | 02 | 01 | - | 01** | 04 |
ಪ್ರವರ್ಗ- 3B | 01 | - | - | - | 01 |
ಪ್ರವರ್ಗ -2A | - | 01 | - | - | 01 |
ಪ್ರವರ್ಗ-2B | 01 | - | - | - | 01 |
ಒಟ್ಟು | 05 | 04 | 01 | 01 | 11 |
*ಬ್ಯಾಕ್ ಲಾಗ್ ಹುದ್ದೆ
** ಕುಷ್ಟರೋಗದಿಂದ ಗುಣಮುಖರಾದ ಅಂಗವಿಕಲರಿಗೆ/ಬುದ್ಧಿಮಾಂದ್ಯತೆ/ಮಾನಸಿಕ ಅಸ್ವಸ್ಥತೆ
ಬೆರಳಚ್ಚು ನಕಲುಗಾರ : 01 ಹುದ್ದೆ
ಹುದ್ದೆಗಳ ವರ್ಗೀಕರಣ:
ಮೀಸಲಾತಿ | ಮಹಿಳೆ | ಒಟ್ಟು |
ಪರಿಶಿಷ್ಟ ಜಾತಿ | 01 | 01 |
ಒಟ್ಟು | 01 | 01 |
ಆದೇಶ ಜಾರಿಕಾರರು: 13 ಹುದ್ದೆಗಳು
ಹುದ್ದೆಗಳ ವರ್ಗೀಕರಣ:
ಮೀಸಲಾತಿ | ಇತರೆ | ಗ್ರಾಮೀಣ | ಮಹಿಳೆ | ಮಾಜಿ ಸೈನಿಕ | ಅಂ.ಅ | ಒಟ್ಟು |
ಸಾಮಾನ್ಯ ಅಭ್ಯರ್ಥಿ | 02 | 02 | 01 | 01 | 01* | 07 |
ಪರಿಶಿಷ್ಟ ಜಾತಿ | 01 | 01 | - | - | - | 02 |
ಪ್ರವರ್ಗ-1 | - | 01 | - | - | - | 01 |
ಪ್ರವರ್ಗ-2A | 01 | 01 | - | - | - | 02 |
ಪ್ರವರ್ಗ-2B | - | 01 | - | - | - | 01 |
ಒಟ್ಟು | 04 | 06 | 01 | 01 | 01 | 13 |
ಜವಾನ: 05 ಹುದ್ದೆಗಳು
ಹುದ್ದೆಗಳ ವರ್ಗೀಕರಣ:
ಮೀಸಲಾತಿ | ಇತರೆ | ಮಹಿಳೆ | ಅಂ.ಅ | ಒಟ್ಟು |
ಪರಿಶಿಷ್ಟ ಜಾತಿ | 01 | - | - | 01 |
ಸಾಮಾನ್ಯ ಅಭ್ಯರ್ಥಿ | 01 | - | 01* | 02 |
ಪ್ರವರ್ಗ- 3B | - | 01 | - | 01 |
ಪ್ರವರ್ಗ-2A | 01 | - | - | 01 |
ಒಟ್ಟು | 03 | 01 | 01 | 05 |
*ಶ್ರವಣದೋಷವುಳ್ಳವರಿಗೆ
ವೇತನ:
ಹುದ್ದೆಗಳಿಗೆ ಆಯ್ಕೆಯಾದ ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ,ಆದೇಶ ಜಾರಿಕಾರಿಗೆ 19,950/- ರಿಂದ 37,900/-ರೂ, ಜವಾನ ಹುದ್ದೆಗಳಿಗೆ 17,000/- ರಿಂದ 28,950/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು ಸಾಮಾನ್ಯ ವರ್ಗದವರಿಗೆ 35 ವರ್ಷ, 2A,2B,3Bವರ್ಗದವರಿಗಿ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ:
ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯವರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಆಯ್ಕೆ ವಿಧಾನ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಒಂದು ನಿಮಿಷಕ್ಕೆ 260 ಅಕ್ಷರಗಳ ವೇಗದಲ್ಲಿ 05 ನಿಮಿಷಗಳ ಉಕ್ತಲೇಖನ ನೀಡಿ ಅದನ್ನು ಬೆರಳಚ್ಚು ಯಂತ್ರದ/ಕಂಪ್ಯೂಟರ್ ಮೂಲಕ 45 ನಿಮಿಷಗಳಲ್ಲಿ ಲಿಪ್ಯಂತರಿಸತಕ್ಕದ್ದು.
- ಅಭ್ಯರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ ಒಂದು ನಿಮಿಷಕ್ಕೆ 120 ಪದಗಳ ವೇಗದಲ್ಲಿ 05 ನಿಮಿಷಗಳ ಉಕ್ತಲೇಖನ ನೀಡಿ ಅದನ್ನು ಬೆರಳಚ್ಚು ಯಂತ್ರದ/ಕಂಪ್ಯೂಟರ್ ಮೂಲಕ 45 ನಿಮಿಷಗಳಲ್ಲಿ ಲಿಪ್ಯಂತರಿಸತಕ್ಕದ್ದು.
- ಈ ಪರೀಕ್ಷೆಯು ಗರಿಷ್ಟ 100 ಅಂಕಗಳದ್ದಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು ಮತ್ತು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ.
ಬೆರಳಚ್ಚುಗಾರ ಹುದ್ದೆಗಳಿಗೆ ಅಭ್ಯರ್ಥಿಯು ನೇಮಕಾತಿ ಪ್ರಾಧಿಕಾರದಿಂದ ನಿರ್ದೇಶಿಸಲ್ಪಟ್ಟ ಅಧಿಕಾರಿಯವರು 15 ನಿಮಿಷಗಳ ಕಾಲ ನೀಡುವ ಉಕ್ತ ಲೇಖನವನ್ನು ಬೆರಳಚ್ಚುಪಡಿಸತಕ್ಕದ್ದು.
- ಈ ಪರೀಕ್ಷೆಯು ಗರಿಷ್ಟ 100 ಅಂಕಗಳದ್ದಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು.
- ಅರ್ಹತಾ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳು, ಸಂದರ್ಶನದಲ್ಲಿ ಗಳಿಸುವ ಅಂಕಗಳು ಮತ್ತು ವಿದ್ಯಾರ್ಹತೆಲ್ಲಿ ಪಡೆದ ಶೇಕಡಾವಾರು ಅಂಕಗಳ ಮೇಲೆ ಆಯ್ಕೆ ಮಾಡಲಾಗುವುದು.
ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಅಭ್ಯರ್ಥಿಯು ನೇಮಕಾತಿ ಪ್ರಾಧಿಕಾರದಿಂದ ನಾಮ ನಿರ್ದೇಶಿಸಲ್ಪಟ್ಟ ಅಧಿಕಾರಿಯುವರು 15ನಿಮಿಷಗಳ ಕಾಲ ನೀಡುವ ಉಕ್ತ ಲೇಖನವನ್ನು ಬೆರಳಚ್ಚುಪಡಿಸತಕ್ಕದ್ದು.
- ಈ ಪರೀಕ್ಷೆಯು ಗರಿಷ್ಟ 100 ಅಂಕಗಳದ್ದಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು.
- ಅರ್ಹತಾ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳು, ಸಂದರ್ಶನದಲ್ಲಿ ಗಳಿಸುವ ಅಂಕಗಳು ಮತ್ತು ವಿದ್ಯಾರ್ಹತೆಯಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಆದೇಶ ಜಾರಿಕಾರ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗಳಿಸಿರುವ ಗರಿಷ್ಟ ಅಂಕಗಳ ಅರ್ಹತೆಯ ಆಧಾರದ ಮೇಲೆ 1:25 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನದ ಪ್ರಕ್ರಿಯೆಗೆ ತೊಡಗಿಸಲಾಗುವುದು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಜವಾನ ಹುದ್ದೆಗೆ 7ನೇ ತರಗತಿಯ ಪರೀಕ್ಷೆಯಲ್ಲಿ ಗಳಿಸಿರುವ ಗರಿಷ್ಟ ಅಂಕಗಳ ಅರ್ಹತೆಯ ಆಧಾರದ ಮೇಲೆ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಇಲ್ಲಿ ಕ್ಲಿಕ್ ಮಾಡಿ