ಬಾಗಲಕೋಟೆ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ "ಬೆರಳಚ್ಚುಗಾರರ, ಬೆರಳಚ್ಚು ನಕಲುಗಾರರ ಮತ್ತು ಜವಾನ" ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸತಕ್ಕದ್ದು.
ಕನಿಷ್ಟ ಶೈಕ್ಷಣಿಕ ವಿದ್ಯಾರ್ಹತೆ:
ಕ್ರ.ಸಂಖ್ಯೆ | ಹುದ್ದೆ | ಕನಿಷ್ಟ ಶೈಕ್ಷಣಿಕ ವಿದ್ಯಾರ್ಹತೆ |
1 | ಬೆರಳಚ್ಚುಗಾರ | 1 ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. 2 ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾದ ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. |
2 | ಬೆರಳಚ್ಚು ನಕಲುಗಾರ | 1 ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. 2 ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾದ ಕಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. |
3 | ಜವಾನ | 1 ಏಳನೇ ತರಗತಿಯಲ್ಲಿ ಉತ್ತೀರ್ಣತೆ. 2 ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. |
ಹುದ್ದೆಗಳ ವಗೀಕರಣ:
ಬೆರಳಚ್ಚುಗಾರರ ಹುದ್ದೆಗಳು: 12
ಮೀಸಲಾತಿ | ಇತರೆ | ಗ್ರಾಮೀಣ | ಮಹಿಳೆ | ಅಂಗವಿಕಲ | ಕನ್ನಡ ಮಾಧ್ಯಮ | ಯೋಜನಾ ನಿರಾಶ್ರಿತ | ಒಟ್ಟು |
ಸಾಮಾನ್ಯ ಅಭ್ಯರ್ಥಿ | - | 2 | 2 | - | 1 | 1 | 6 |
ಪರಿಶಿಷ್ಟ ಜಾತಿ | 1 | - | 1 | - | - | - | 2 |
ಪರಿಶಿಷ್ಟ ಪಂಗಡ | - | 1 | - | - | - | - | 1 |
ಪ್ರವರ್ಗ-2A | 1 | - | - | - | - | - | 1 |
ಪ್ರವರ್ಗ-3A | - | 1 | - | - | - | - | 1 |
ಪ್ರವರ್ಗ-3B | - | 1 | - | - | - | - | 1 |
ಒಟ್ಟು | - | 5 | 3 | - | 1 | 1 | 12 |
ಬೆರಳಚ್ಚು- ನಕಲುಗಾರರ ಹುದ್ದೆಗಳು -03
ಮೀಸಲಾತಿ | ಇತರೆ | ಗ್ರಾಮೀಣ | ಮಹಿಳೆ | ಅಂಗವಿಕಲ | ಕನ್ನಡ ಮಾಧ್ಯಮ | ಯೋಜನಾ ನಿರಾಶ್ರಿತ | ಒಟ್ಟು |
ಸಾಮಾನ್ಯ ಅಭ್ಯರ್ಥಿ | 1 | - | - | 1* | - | - | 2 |
ಪ್ರವರ್ಗ-3B | - | - | 1 | - | - | - | 1 |
ಒಟ್ಟು | 1 | - | 1 | 1 | - | - | 3 |
* ಶ್ರವಣದೋಷವುಳ್ಳವರಿಗೆ ಮಾತ್ರ
ಜವಾನ ಹುದ್ದೆಗಳು: 13
ಮೀಸಲಾತಿ | ಇತರೆ | ಗ್ರಾಮೀಣ | ಮಹಿಳೆ | ಅಂಗವಿಕಲ | ಮಾಜಿ ಸೈನಿಕ | ಯೋಜನಾ ನಿರಾಶ್ರಿತ | ಒಟ್ಟು |
ಸಾಮಾನ್ಯ ಅಭ್ಯರ್ಥಿ | 2 | 1 | 1 | 1* | 1 | 1 | 7 |
ಪರಿಶಿಷ್ಟ ಜಾತಿ | - | 1 | 1 | - | - | - | 2 |
ಪ್ರವರ್ಗ-1 | - | - | - | 1 | - | - | 1 |
ಪ್ರವರ್ಗ-2A | - | - | 1 | - | - | - | 1 |
ಪ್ರವರ್ಗ-3A | - | 1 | - | - | - | - | 1 |
ಪ್ರವರ್ಗ-3B | - | - | - | 1 | - | - | 1 |
ಒಟ್ಟು | 2 | 3 | 3 | 3 | 1 | 1 | 13 |
* ಕುಷ್ಟರೋಗದಿಂದ ಗುಣಮುಖರಾದ ಅಂಗವಿಕಲರಿಗೆ/ಬುದ್ದಿಮಾಂಧ್ಯತೆ/ಮಾನಸಿಕ ಅಸ್ವಸ್ಥತೆ ಹೊಂದಿದವರಿಗೆ ಮಾತ್ರ
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಜೆಯಾದ ಬೆರಳಚ್ಚುಗಾರರು ಹುದ್ದೆಗಳಿಗೆ ವೇತನ ಶ್ರೇಣಿ= 21,400/- ರಿಂದ 42,000/- ರೂ ಇರುತ್ತದೆ.
ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ವೇತನ ಶ್ರೇಣಿ- 21,400/-- ರಿಂದ 42,0000/-ರೂ ಇರುತ್ತದೆ. ಜವಾನ ಹುದ್ದೆಗಳಿಗೆ
ವೇತನ ಶ್ರೇಣಿ- 17,000/- ರಿಂದ 28,950/- ರೂ ಇರುತ್ತದೆ.
ವಯೋಮಿತಿ:
ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಈ ಕೆಳಕಂಡ ವಯೋಮಿತಿಯನ್ನು ಹೊಂದಿರತಕ್ಕದ್ದು.
ಕ್ರ.ಸಂಖ್ಯೆ. | ಅಭ್ಯರ್ಥಿಯ ಪ್ರವರ್ಗ | ಕನಿಷ್ಠ ವಯೋಮಿತಿ | ಗರಿಷ್ಠ ವಯೋಮಿತಿ |
1 | ಸಾಮಾನ್ಯ ವರ್ಗ | 18 ವರ್ಷಗಳು | 35 ವರ್ಷಗಳು |
2 | ಪ್ರವರ್ಗ | 18 ವರ್ಷಗಳು | 38 ವರ್ಷಗಳು |
3 | ಪರಿಶಿಷ್ಟ ಜಾತಿ: ಪರಿಶಿಷ್ಟ ಪಂಗಡ: ಪ್ರವರ್ಗ-1 | 18 ವರ್ಷಗಳು | 40 ವರ್ಷಗಳು |
ಸರಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಮತ್ತು ಅಂಗವಿಕಲರಿಗೆ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಆಯ್ಕೆಯ ವಿಧಾನ:
ಬೆರಳಚ್ಚುಗಾರರ ಹುದ್ದೆಗಳಿಗೆ ಬೆರಳಚ್ಚು ಮಾಡಲು ಉಕ್ತ ಲೇಖನವನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ನೀಡಲಾಗುವುದು. ಇದಕ್ಕೆ 100 ಗರಿಷ್ಟ ಅಂಕಗಳನ್ನು ನಿಗದಿಪಡಿಸಿದ್ದು, ಅರ್ಹತೆ ಹೊಂದಲು ಕನಿಷ್ಟ 50 ಅಂಕಗಳನ್ನು ಪಡೆಯಬೇಕು. ಅಭ್ಯರ್ಥಿಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ, ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಹಾಗೂ ಈ ಪ್ರಾಧಿಕಾರ ನಡೆಸಲಾದ ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಒಂದು ಹುದ್ದೆಗೆ 1:5 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಯು ಹುದ್ದೆಗೆ ನಿಗದಿಪಡಿಸಲಾದ ಕನಿಷ್ಟ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು, ಈ ಪ್ರಾಧಿಕಾರವು ನಡೆಸಲಾದ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಪಡೆದ ಅಂಕಗಳು ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುವುದು.
ಬೆರಳಚ್ಚು ನಕಲುಗಾರರ ಹುದ್ದೆಗಳಿಗೆ ಬೆರಳಚ್ಚು ಮಾಡಲು ಉಕ್ತ ಲೇಖನವನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ನೀಡಲಾಗುವುದು. ಇದಕ್ಕೆ 100 ಗರಿಷ್ಟ ಅಂಕಗಳನ್ನು ನಿಗದಿಪಡಿಸಿದ್ದು, ಅರ್ಹತೆ ಹೊಂದಲು ಕನಿಷ್ಟ 50 ಅಂಕಗಳನ್ನು ಪಡೆಯಬೇಕು. ಅಭ್ಯರ್ಥಿಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ, ಕಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಹಾಗೂ ಈ ಪ್ರಾಧಿಕಾರ ನಡೆಸಲಾದ ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಒಂದು ಹುದ್ದೆಗೆ 1:5 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಯು ಹುದ್ದೆಗೆ ನಿಗದಿಪಡಿಸಲಾದ ಕನಿಷ್ಟ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುವುದು.
ಜವಾನ ಹುದ್ದೆಗಳಿಗೆ ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 1:10 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ
ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 7 ನೇ ತರಗತಿಯಲ್ಲಿ ಪಡೆದ ಅಂಕಗಳನ್ನು ಸಂದರ್ಶನಕ್ಕೆ ಕರೆಯಲು ಮಾತ್ರ ಪರಿಗಣಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿ ನಿಯಮಗಳಂತೆ ಎರಡು ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯನ್ನು ಪೂರೈಸಬೇಕಾಗುವುದು.
ನಿಗದಿಪಡಿಸಿದ ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ | ರೂ.300/- |
ಪವ್ರರ್ಗ2A , 3A ಮತ್ತು 3B ಸೇರಿದ ಅಭ್ಯರ್ಥಿಗಳಿಗೆ | ರೂ.150/- |
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ | ಶುಲ್ಕ ವಿನಾಯಿತಿ ಇರುತ್ತದೆ. |
ನಿಗದಿತ ಶುಲ್ಕವನ್ನು ನ್ಯಾಯಾಲಯದ ಜಾಲತಾಣ https://districts.ecourts.gov.in/bagalkot ರಲ್ಲಿ ನೀಡಲಾದ ಲಿಂಕ್ ಮೂಲಕ ಭಾರತೀಯ ಸ್ಟೇಟ್ ಬ್ಯಾಂಕ್ ನ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ಆನ್ ಲೈನ್ ಪೇಮೆಂಟ್ ಅನ್ನು ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ಚಲನ್ ಡೌನ್ ಲೋಡ್ ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಚಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ಜಾಲತಾಣದಿಂದ ಡೌನ್ ಲೋಡ್ ಮಾಡಿಕೊಂಡು ಅದರ ಮುದ್ರಿತ ಪ್ರತಿಯನ್ನು ಪಡೆದುಕೊಂಡು ಭಾರತೀಯ ಸ್ಟೇಟ್ ಬ್ಯಾಂಕ್ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ /ಪೋಸ್ಟಲ್ ಆರ್ಡರ್ / ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ, ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಗಳು ನಿಗದಿಪಡಿಸಿದ ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ:14.2.2019ಕೊನೆಯ ದಿನವಾಗಿದ್ದು, ನಿಗದಿತ ಅವಧಿಯೊಳಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ನ ಯಾವುದೇ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.
ಈ ಹುದ್ದೆಗಳ ಬಗೆಗೆ ಇನ್ನಷ್ಟು ಸೂಚನೆಯನ್ನು ಓದಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.