ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ, ಅಗ್ನಿಶಾಮಕ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 27,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಸ್‌ಎಸ್‌ಎಲ್‌ಸಿ ಪಾಸ್ ? ಹಾಗಿದ್ರೆ ಈ ಕೂಡಲೇ ಅಗ್ನಿಶಾಮಕ, ಚಾಲಕ ಮತ್ತು ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಹಾಕಿ

ಖಾಲಿ ಹುದ್ದೆಗಳ ವಿವರ:

ಉಳಿಕೆ ಮೂಲಕ ವೃಂದದ ವಿವರ:
ಅಗ್ನಿಶಾಮಕರು-983 ಹುದ್ದೆಗಳು
ಅಗ್ನಿಶಾಮಕ ಚಾಲಕರು-199 ಹುದ್ದೆಗಳು
ಚಾಲಕ ತಂತ್ರಜ್ಞರು-62 ಹುದ್ದೆಗಳು
ಒಟ್ಟು 1244 ಹುದ್ದೆಗಳು

ಕಲ್ಯಾಣ-ಕರ್ನಾಟಕ ವೃಂದದ ವಿವರ:
ಅಗ್ನಿಶಾಮಕರು-239 ಹುದ್ದೆಗಳು
ಅಗ್ನಿಶಾಮಕ ಚಾಲಕರು-28 ಹುದ್ದೆಗಳು
ಚಾಲಕ ತಂತ್ರಜ್ಞರು-20 ಹುದ್ದೆಗಳು
ಒಟ್ಟು 287 ಹುದ್ದೆಗಳು

ವಿದ್ಯಾರ್ಹತೆ:

ಜುಲೈ 20,2020ರ ಅನ್ವಯ ಅಗ್ನಿಶಾಮಕ ಮತ್ತು ಅಗ್ನಿಶಾಮಕ ಚಾಲಕರಿಗೆ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ಈ ಪರೀಕ್ಷೆಯಲ್ಲಿ ಕನ್ನಡವು ಒಂದು ಪಠ್ಯ ವಿಷಯವಾಗಿರಬೇಕು. ಚಾಲಕ ತಂತ್ರಜ್ಞರಿಗೆ ಎಸ್‌ಎಸ್‌ಎಲ್‌ಸಿ/10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು ಜೊತೆಗೆ ಕನ್ನಡವು ಒಂದು ಪಠ್ಯ ವಿಷಯವಾಗಿರಬೇಕು ಮತ್ತು ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಮತ್ತು ಸರ್ಕಾರದಿಂದ ಅಂಗೀಕೃತಗೊಂಡ ಐಟಿಐ ನ ಆಟೋಮೊಬೈಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು. ಭಾರಿ ವಾಹನ ಚಾಲನಾ ಪರವಾನಗಿ ಮತ್ತು ಐಟಿಐ ನ ಪ್ರಮಾಣ ಪತ್ರವನ್ನು ಕೂಡ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕ ಜುಲೈ 20,2020ಕ್ಕೆ ಹೊಂದಿರಬೇಕು.

ವಯೋಮಿತಿ:

ಜುಲೈ 20,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 26 ವರ್ಷದೊಳಗಿನ ಇತರೆ ಅಭ್ಯರ್ಥಿಗಳು ಮತ್ತು ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನದ ವಿವರ:

ಅಗ್ನಿಶಾಮಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 47,650/-ರೂ, ಅಗ್ನಿಶಾಮಕ ಚಾಲಕ ಮತ್ತು ಚಾಲಕ ತಂತ್ರಜ್ಞ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವಿವಿಧ ವಾಹನಾ ಚಾಲನಾ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಮೂಲಕ ದಾಖಲಾತಿಗಳ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ವರ್ಗ, 2ಎ,2ಬಿ, 3ಎ, ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಹೆಚ್.ಡಿ.ಎಫ್.ಸಿ ಅಥವಾ ಸ್ಥಳೀಯ ಅಂಚೆ ಕಚೇರಿ ಅಧಿಕೃತ ಶಾಖೆಗಳಲ್ಲಿ ಮಾತ್ರ ಜುಲೈ 29,2020ರೊಳಗೆ ಪಾವತಿಸಬೇಕಿರುತ್ತದೆ, ಕಚೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬಹುದು. ಡಿ.ಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://fm.ksfesonline.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 27,2020ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Karnataka state fire and emergency services recruitment 2020 notification has been released for the recruitment of firemen posts. Interested candidates can apply through online before July 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X