ಕರ್ನಾಟಕ ಅರಣ್ಯ ಇಲಾಖೆಯಲ್ಲಿ 5 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ಅರ್ಹತೆ:
ಅರ್ಜಿದಾರರು ಸಹಾಯಕ ಆಯುಕ್ತರು (ಕಂದಾಯ) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರಬೇಕು.
ವಯೋಮಿತಿ:
ಅರ್ಜಿಯನ್ನು ಆಹ್ವಾನಿಸಿ ಜಾರಿ ಮಾಡಲಾಗಿರುವ ಈ ಅಧಿಸೂಚನೆಯ ದಿನಾಂಕ್ಕೆ ಅರ್ಜಿದಾರರು 70 ವರ್ಷ ವಯಸ್ಸನ್ನು ಮೀರಿರಬಾರದು.
ವೇತನ:
ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಜಿ ಮತ್ತು ಅಧಿಸೂಚನೆಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ https://aranya.gov.in/ ಗೆ ಭೇಟಿ ನೀಡಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ನೊಂದಾಯಿತ ಅಂಚೆ ಮುಖಾಂತರ ಹಾಗೂ ಮುದ್ದಾಂ ಆಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಪಡೆ ಮುಖ್ಯಸ್ಥರು), ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು-560003 ವಿಳಾಸಕ್ಕೆ ಜೂನ್ 15 ರಿಂದ ಜುಲೈ 15,2021ರ ಅಪರಾಹ್ನ 4:30ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿದಾರರು ಸಹಾಯಕ ಆಯುಕ್ತರು ಈ ಹುದ್ದೆಯಲ್ಲಿ ಸೇವೆ ಸಲ್ಲಿದ ಕುರಿತು ಸೇವಾ ವಿವರಗಳ ಮಾಹಿತಿ ಹಾಗೂ ವಯೋಮಿತಿಯ ಕುರಿತು ಅಧಿಕೃತ ದಾಖಲೆಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸುವುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.