ಕರ್ನಾಟ ರಾಜ್ಯ, ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸುತ್ತಿರುವ ರಾಜ್ಯ ಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ 8 ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 17ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ ಇಂತಿವೆ.
ಖಾಲಿ ಹುದ್ದೆಗಳ ವಿವರ:
ರಾಜ್ಯ ತಾಂತ್ರಿಕ ಘಟಕದ ಮುಖ್ಯಸ್ಥರು
ಕಾರ್ಯಕರಮ ಸಂಯೋಜಕರು
ಸಂವಹನ ಅಧಿಕಾರಿ
ಸಾಮರ್ಥ್ಯವೃದ್ಧಿ ಅಧಿಕಾರಿ
ಮಾಹಿತಿ ತಂತ್ರಜ್ಞಾನ ಮತ್ತು ನಿರ್ವಹಣಾ ವ್ಯವಸ್ಥೆ ತಜ್ಞರು
ತೋಟಗಾರಿಕಾ ತಜ್ಞರು
ದತ್ತಾಂಶ ವಿಶ್ಲೇಷಕರು
ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ತಜ್ಞರು
ವಿದ್ಯಾರ್ಹತೆ:
ವಿವಿಧ ಹುದ್ದೆಗಳಿಗೆ ತತ್ಸಮಾನ ವಿದ್ಯಾರ್ಹತೆ ಹಾಗೂ ಅನುಭವವುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ಮತ್ತು ವೇತನದ ವಿವರ:
ಈ ಹುದ್ದೆಗಳಿಗೆ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಮತ್ತು ವೇತನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಹ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯಲ್ಲಿ ನೇರವಾಗಿ ಅಥವಾ ಅಂಚೆಯ ಮೂಲಕ ಕೃಷಿ ಆಯುಕ್ತರು, ಕೃಷಿ ಆಯುಕ್ತಾಲಯ, ಶೇಷಾದ್ರಿ ರಸ್ತೆ, ಬೆಂಗಳೂರು -560001 ವಿಳಾಸಕ್ಕೆ ಆಗಸ್ಟ್ 17.2020ರಂದು ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.