ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್ಸಿ) ಯಲ್ಲಿ ಮಾಹಿತಿ ತಂತ್ರಜ್ಞಾನ ತಜ್ಞರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ.
ಕೆಪಿಎಸ್ಸಿ: ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಅರ್ಜಿ ಆಹ್ವಾನ
ಸ್ಮಾರ್ಟ್ ಸಿಟಿ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಮಾಹಿತಿ ತಂತ್ರಜ್ಞಾನ ತಜ್ಞರ ನೇಮಕಾತಿ ನಡೆಯುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಫೆ.3 ರಂದು ಕೆ ಎಲ್ ಇ ಸೊಸೈಟಿ ಬೃಹತ್ ಉದ್ಯೋಗ ಮೇಳ
ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ, ತುಮಕೂರು ಮತ್ತು ಬೆಂಗಳೂರು ಸೇರಿದಂತೆ ಒಟ್ಟು ರಾಜ್ಯದ ಏಳು ನಗರಗಳಲ್ಲಿ ಸ್ಮಾರ್ಟ್ ಸಿಟಿ ಮಿಷನ್ ಯೋಜನೆ ಜಾರಿಗೊಳಿಸಲಾಗಿದ್ದು, ಬೆಂಗಳೂರಿನಲ್ಲಿ ಈ ಯೋಜನೆಯ ಪ್ರಾಜೆಕ್ಟ್ ಗಳನ್ನೂ ಅನುಷ್ಠಾನ ಗೊಳಿಸಲು ಮಾಹಿತಿ ತಂತ್ರಜ್ಞಾನ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ವಿದ್ಯಾರ್ಹತೆ
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್/ಇನ್ಫರ್ಮೇಷನ್ ಟೆಕ್ನಾಲಜಿ/ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ವಿಥ್ ಬ್ಯಾಚುಲರ್ ಇನ್ ಇಂಜಿನಿಯರಿಂಗ್ (ಸಿಎಸ್/ಐಟಿ/ಇ ಅಂಡ್ ಟಿಸಿ) ಪದವಿ ಗಳಿಸಿರಬೇಕು.
ಐಟಿ ಕ್ಷೇತ್ರದಲ್ಲಿ ಕನಿಷ್ಠ ಎಂಟು ವರ್ಷಗಳ ಅನುಭವವಿರಬೇಕು
ಡಾಟಾ ಸೆಂಟರ್ ಕನ್ಸಲ್ಟೆನ್ಸಿ ಮತ್ತು ಕ್ಲೌಡ್ ಮ್ಯಾನೇಜ್ಮೆಂಟ್ ಅನುಭವವಿರಬೇಕು
ನೆಟ್ವರ್ಕ್, ನೆಟ್ವರ್ಕ್ ಸೆಕ್ಯೂರಿಟಿ ಕ್ಷೇತ್ರದಲ್ಲಿ ಅನುಭವವಿರಬೇಕು
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ ಅರ್ಜಿ ಭರ್ತಿ ಮಾಡುವ ವೇಳೆ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2018
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ