ಮಂಡ್ಯ ಜಿಲ್ಲೆಯ ಮಹತ್ಮಗಾಂಧಿ ನೇರಗಾ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕರ (ಕೃಷಿ ಮತ್ತು ಅರಣ್ಯ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಬಿ.ಎಸ್ಸಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 25,2021
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: ಮಾರ್ಚ್ 30,2021
ತಾತ್ಕಾಲಿಕ ಮೆರಿಟ್ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 6,2021
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 25,2021ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
ಜಿಲ್ಲಾ ಪಂಚಾಯತ್ ಕಾರ್ಯಾಲಯ,
ಮಂಡ್ಯ
ಅಭ್ಯರ್ಥಿಗಳು ಮಂಡ್ಯ ಜಿಲ್ಲಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.