ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರ ಜನವರಿ 17ರಂದು ಮಿನಿ ಉದ್ಯೋಗ ಮೇಳ ಆಯೋಜಿಸಿದೆ. ನಿರುದ್ಯೋಗ ಯುವಕ, ಯುವತಿಯರು ಸೇರಿದಂತೆ, ಉದ್ಯೋಗ ಹುಡುಕುತ್ತಿರುವವರು ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಎನ್ಎಲ್ಸಿ: 150 ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ನೇಮಕಾತಿ
ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದ್ದು, . ಜನವರಿ 17ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 2.30ರ ತನಕ ಮಿನಿ ಉದ್ಯೋಗ ಮೇಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ. ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಐಬಿಪಿಎಸ್: ಕೆನರಾ ಬ್ಯಾಂಕ್ ಪ್ರೊಬೇಷನರಿ ಆಫೀಸರ್ಸ್ ನೇಮಕಾತಿ
ಉದ್ಯೋಗ ಮೇಳದಲ್ಲಿ ಕಿರ್ಲೋಸ್ಕರ್ ಪ್ರೈ.ಲಿ ಗಿಣಿಗೇರಾ (ಕೊಪ್ಪಳ), ಅಮೂಲ್ಯ ಸಲೂಷನ್ಸ್ ಪ್ರೈ.ಲಿ ಬೆಂಗಳೂರು, ಚಾಲುಕ್ಯ ಮೋಟಾರ್ಸ್ ಗದಗ, ನ್ಯಾಷಿನಲ್ ಮ್ಯಾನೇಜ್ಮೆಂಟ್ ಸರ್ವೀಷಸ್ ಬೆಂಗಳೂರು ಮತ್ತು ಎ.ಪಿ.ಡಿ ಇಂಡಿಯಾ ಸಂಸ್ಥೆ ಬೆಂಗಳೂರು, ಹಾಗೂ ಖಾಸಗಿ ಕಂಪನಿಗಳು ಪಾಲ್ಗೊಳ್ಳಲಿವೆ.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ (ಫಿಟ್ಟರ್, ಎಲೆಕ್ಟ್ರಾನಿಕ್, ಮೆಕಾನಿಕ್, ಡಿಪ್ಲೊಮಾ (ಮೆಕಾನಿಕ್), ಬಿಎ, ಬಿಕಾಂ, ಬಿಎಸ್ಸಿ ಪದವಿ ಪಡೆದವರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.
ಬೆಂಗಳೂರಿನ ಎ.ಪಿ.ಡಿ ಇಂಡಿಯಾ ಸಂಸ್ಥೆ 5ನೇ ತರಗತಿಯಿಂದ ಯಾವುದೇ ಪದವಿ ವಿದ್ಯಾರ್ಹತೆಯುಳ್ಳ ವಿಕಲ ಚೇತನ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಿದೆ.
ಮೇಳದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು, ಆಧಾರ ಕಾರ್ಡ್ ಝೆರಾಕ್ಸ್ ಪ್ರತಿ, ಬಯೋಡಾಟಾ, ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ತರಬೇಕು ಎಂದು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.