ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೈಸೂರು ಜಿಲ್ಲೆಗೆ 4 ತಾಂತ್ರಿಕ ಸಹಾಯಕರು (ಅರಣ್ಯ/ಕೃಷಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಬಿ.ಎಸ್ಸಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ನಡೆಸುವುದು ಮತ್ತು ನಿಗದಿತ ಮಾನದಂಡಗಳಂತೆ ತಾತ್ಕಾಲಿಕ ಮೆರಿಟ್ ಪಟ್ಟಿ ತಯಾರಿಸಿ ಪ್ರಕಟಿಸಲಾಗುವುದು.
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ನಿಗದಿತ ಅರ್ಜಿಗಳನ್ನು ಜಿಲ್ಲಾ ಪಂಚಾಯಿತಿ ಕಛೇರಿ, ಡಿ.ಆರ್.ಡಿ.ಡಿ.ಎ ಶಾಖೆಯಲ್ಲಿ ಪಡೆದು, ನಂತರ ಭರ್ತಿ ಮಾಡಿ ಕಚೇರಿಗೆ ಮಾರ್ಚ್ 31,2021ರೊಳಗೆ ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.