ರಾಜ್ಯದಲ್ಲಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೌಕರರ ಸಾಮಾನ್ಯ ಶ್ರೇಣಿ ಸಮಿತಿ ಇದರಲ್ಲಿ ಖಾಲಿ ಇರುವ ಲೆಕ್ಕಾಧಿಕಾರಿಗಳು,ಪ್ರಥಮ ದರ್ಜೆ ಸಹಾಯಕರು, ಹಿರಿಯ ಕ್ಷೇತ್ರಾಧಿಕಾರಿ, ಎರಡನೇ ದರ್ಜೆ ಸಹಾಯಕರು, ಕಿರಿಯ ಕ್ಷೇತ್ರಾಧಿಕಾರಿ ಮತ್ತು ಬೆರಳಚ್ಚುಗಾರರು/ಗಣಕ ಯಂತ್ರ ನಿರ್ವಾಹಕರ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದೆ.
ಒಟ್ಟು 48 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೋರಿಯರ್ ಇತ್ಯಾದಿ ಮೂಲಕ ಕಳುಹಿಸಲು ಅವಕಾಶವಿರುವುದಿಲ್ಲ.
ಹುದ್ದೆಗಳ ವಿವರ:
ಲೆಕ್ಕಾಧಿಕಾರಿ -6 ಹುದ್ದೆಗಳು
ಹಿರಿಯ ಕ್ಷೇತ್ರಾಧಿಕಾರಿ -3 ಹುದ್ದೆಗಳು
ಪ್ರ.ದ. ಸಹಾಯಕರು - 7 ಹುದ್ದೆಗಳು
ಕಿರಿಯ ಕ್ಷೇತ್ರಾಧಿಕಾರಿ -9 ಹುದ್ದೆಗಳು
ಬೆರಳಚ್ಚುಗಾರರು/ಗಣಕಯಂತ್ರ ನಿರ್ವಾಹಕರು - 2 ಹುದ್ದೆಗಳು
ಸಹಾಯಕರು - 4 ಹುದ್ದೆಗಳು
ಜವಾನರು - 13 ಹುದ್ದೆಗಳು
ಒಟ್ಟು - 48 ಹುದ್ದೆಗಳು
ವಿದ್ಯಾರ್ಹತೆ:
ಲೆಕ್ಕಾಧಿಕಾರಿ, ಹಿರಿಯ ಕ್ಷೇತ್ರಾಧಿಕಾರಿ ಮತ್ತು ಪ್ರ.ದ. ಸಹಾಯಕರು ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾನಿಲಯದ ಬಿ.ಕಾಂ / ಬಿ.ಬಿ.ಎಂ / ಬಿ.ಬಿ.ಎ / ಬಿ.ಸಿ.ಎ / ಸಹಕಾರದಲ್ಲಿ ಪದವೀಧರರಾಗಿರಬೇಕು. ಕಿರಿಯ ಕ್ಷೇತ್ರಾಧಿಕಾರಿ ಮತ್ತು ಬೆರಳಚ್ಚುಗಾರರು /ಗಣಕಯಂತ್ರ ನಿರ್ವಾಹಕರು ಹುದ್ದೆಗಳಿಗೆ ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು ಜೊತೆಗೆ ಗಣಕಯಂತ್ರದ ಜ್ಞಾನ ಹೊಂದಿರಬೇಕು. ಸಹಾಯಕರು ಹುದ್ದೆಗಳಿಗೆ ಎಸ್ಎಸ್ಎಲ್ಸಿ ವಿದ್ಯಾರ್ಹತೆ ಮತ್ತು ಜವಾನರು ಹುದ್ದೆಗಳಿಗೆ 8ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
ವೇತನದ ವಿವರ:
ಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,650/- ರಿಂದ 32,000/-ರೂ,
ಹಿರಿಯ ಕ್ಷೇತ್ರಾಧಿಕಾರಿ ಮತ್ತು ಪ್ರ.ದ. ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,550/- ರಿಂದ 26,700/-ರೂ, ಕಿರಿಯ ಕ್ಷೇತ್ರಾಧಿಕಾರಿ ಮತ್ತು ಬೆರಳಚ್ಚುಗಾರರು /ಗಣಕಯಂತ್ರ ನಿರ್ವಾಹಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,600/- ರಿಂದ 21,000/-ರೂ, ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 10,400/-ರಿಂದ 16,400/-ರೂ ಮತ್ತು ಜವಾನರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,600/-ರಿಂದ 14,550/-ರೂ ವೇತನವನ್ನು ನೀಡಲಾಗುವುದು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಟ 40 ವರ್ಷಗಳು ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿದಾರರು 500/-ರೂ + 50/-ರೂ ಅಂಚೆ ಸೇವೆ ಶುಲ್ಕವನ್ನು ರಾಜ್ಯದ ಯಾವುದೇ ವಿದ್ಯುನ್ಮಾನ ಪಾವತಿ ಲಭ್ಯದ ಅಂಚೆ ಕಚೇರಿಗೆ ತೆರಳಿ ನಿಗದಿತ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕವನ್ನು ಏಪ್ರಿಲ್ 17,2020ರೊಳಗೆ ಪಾವತಿಸಬೇಕಿರುತ್ತದೆ. ಡಿಡಿ/ಪೋಸ್ಟಲ್ ಆರ್ಡರ್ ಅಥವಾ ಇನ್ನಿತರೆ ರೀತಿಯಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು. ವೈಯಕ್ತಿ ಸಂದರ್ಶನ ಇರುವುದಿಲ್ಲ.
ಸೂಚನೆಗಳು:
ಬ್ಯಾಂಕಿನಲ್ಲಿ ಹಾಲಿ ಇರುವ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂಬಂಧ ನೇರ ನೇಮಕಾತಿ ಪ್ರಕ್ರಿಯೆಯ ಪೂರ್ಣ ವಿವರಗಳನ್ನು ಬ್ಯಾಂಕಿನ ಜಾಲ ತಾಣದಿಂದ ಪಡೆದು ತಾಕ್ಷಣಿಕ ಸೇವೆಯ (online) ಮೂಲಕವೇ ಅರ್ಜಿ ಸಲ್ಲಿಸತಕ್ಕದ್ದು. ಬೇರೆ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
• ಅಭ್ಯರ್ಥಿಯು ಭಾರತೀಯ ನಾಗರೀಕನಾಗಿರತಕ್ಕದ್ದು.
• ಕನ್ನಡ ಭಾಷೆಯಲ್ಲಿ ಓದಲು, ಬರೆಯಲು, ಅರ್ಥೈಸಿಕೊಳ್ಳಲು ಮಾತನಾಡಲು ಬರಬೇಕು.
• ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸತಕ್ಕದ್ದು.
• ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದಲ್ಲಿ ಅಂತಹ ಅಭ್ಯರ್ಥಿಗಳು ಒಂದೇ ನೊಂದಣಿ ಸಂಖ್ಯೆಯಡಿಯಲ್ಲಿಯೇ ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ, ಪ್ರತ್ಯೇಕವಾಗಿ ಅರ್ಜಿ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಏಪ್ರಿಲ್ 16,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಕೃತ ವೆಬ್ಸೈಟ್ http://recruit-app.com/cccpcardbl2020/ ಗೆ ಭೇಟಿ ನೀಡಿ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ