ರಾಯಚೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಂಚೆ ಇಲಾಖೆಯಲ್ಲಿ 607 ಹುದ್ದೆಗಳ ನೇಮಕಾತಿ
ಒಟ್ಟು 24 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, 7ನೇ ತರಗತಿ ಉತ್ತೀರ್ಣರಾಗಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 30 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಹುದ್ದೆಯ ವಿವರ
ಜವಾನರು-16 ಹುದ್ದೆಗಳು
ವೇತನ ಶ್ರೇಣಿ:ರೂ.9600-14550/-
ವಿದ್ಯಾರ್ಹತೆ
- 7ನೇ ತರಗತಿ ತೇರ್ಗಡೆ ಹೊಂದಿರಬೇಕು
- ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು
ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರಾಯಚೂರು ಜಿಲ್ಲಾ ಕೋರ್ಟ್ ನ ವೆಬ್ ಸೈಟ್ ನಲ್ಲಿ ಲಗತ್ತಿಸಿರುವ ನಮೂನೆಯನ್ನು ಬೆರಳಚ್ಚು ಮಾಡಿ/ಕಂಪ್ಯೂಟರ್ ಮೂಲಕ ತಯಾರಿಸಿ ಅಭ್ಯರ್ಥಿಯು ತಮ್ಮ ಕೈಬರಹ ತಮಗೆ ಅನ್ವಯಿಸುವ ಎಲ್ಲಾ ಅಂಕಣಗಳನ್ನು ಭರ್ತಿ ಮಾಡುವುದು. ಅಭ್ಯರ್ಥಿಯು ತನ್ನ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯ ಮೇಲೆ ಅಂಟಿಸಿ, ಅದರ ಮೇಲೆ ಸಹಿ ಮಾಡುವುದರೆ ಜೊತೆಗೆ ಅರ್ಜಿ ನಮೂನೆ ಕೊನೆಯಲ್ಲಿ ಘೋಷಣೆ ನಂತರ ಸಹಿ ಮಾಡುವುದು.
ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸು, ಮತ್ತು ಕೋರಿರುವ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳನ್ನು ಅಧಿಕೃತ ಅಧಿಕಾರಿಗಳಿಂದ ಪಡೆದು, ಅವುಗಳು ನಕಲುಗಳನ್ನು ಸ್ವಯಂ ದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಅರ್ಜಿಯನ್ನು "ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ನ್ಯಾಯಾಲಯ, ರಾಯಚೂರು-584101" ಇವರಿಗೆ ತಲುಪುವಂತೆ ಕಳುಹಿಸುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-01-2018
ಆಯ್ಕೆ ವಿಧಾನ
ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರುವಿನಲ್ಲಿ ಆಧಾರದ ಮೇಲೆ 1:10 (ಒಂದು ಹುದ್ದೆಗೆ 10 ಅಭ್ಯರ್ಥಿಗಳು) ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಸಂದರ್ಶನವು ಹತ್ತು ಅಂಕಗಳನ್ನು ಒಳಗೊಂಡಿರುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











