ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ನಿರ್ದೇಶಕ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 63 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ನಿರ್ದೇಶಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 60,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗೆ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://rdpr.karnataka.gov.in/english ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
ಆಯುಕ್ತರು ಗ್ರಾಮೀಣಾಭಿವೃದ್ಧಿ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,
3ನೇ ಹಂತ, 2ನೇ ಮಹಡಿ,
ಬಹುಮಹಡಿ ಕಟ್ಟಡ,
ಡಾ. ಅಂಬೇಡ್ಕರ್ ವೀಧಿ,
ಬೆಂಗಳೂರು-560001.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.