ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 7 ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಎಂಸಿಎ/ಎಂಎಸ್ಸಿ/ಬಿಇ/ಪೋಸ್ಟ್ ಗ್ರಾಜುಯೇಟ್ ಪದವಿ/ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಸಮಾಲೋಚಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/- ರಿಂದ 25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜುಲೈ 5,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ತದನಂತರ ಬಂದಂತಹ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಕಚೇರಿ ವಿಳಾಸ:
ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,
೨ನೇ ಮಹಡಿ,
ಕೆ.ಹೆಚ್.ಬಿ ಕಟ್ಟಡ,
ಕಾವೇರಿ ಭವನ,
ಕೆ.ಜಿ.ರಸ್ತೆ,
ಬೆಂಗಳೂರು 5600 009.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.