ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಮಂಡ್ಯದ ಕಂದಾಯ ಇಲಾಖೆಯಲ್ಲಿ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮಾರ್ಚ್ 8, 2018. ಅರ್ಜಿ ಜತೆ ಇನ್ನಿತ್ತರ ಪ್ರಮುಖ ದಾಖಲೆಗಳನ್ನ ನೀಡಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ

| ಹುದ್ದೆ ಸಂಖ್ಯೆ | 01 |
| ಹುದ್ದೆ ವಿವರ | ಕಾನೂನು ಸಲಹೆಗಾರ |
| ವಿದ್ಯಾರ್ಹತೆ |
|
| ವೇತನ | ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958ರ ನಿಯಮ 313 (ಬಿ) ಪ್ರಕಾರ ಮಾಸಿಕ ಸಂಚಿತ ವೇತನವನ್ನು ನಿಗಧಿಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ |
ಅರ್ಜಿ ಜತೆ ಅಭ್ಯರ್ಥಿಗಳು ಅಧಿಕಾರಿ /ನೌಕರರು ಸರ್ಕಾರಿ ಕರ್ತವ್ಯದಿಂದ ನಿವೃತ್ತಿ ಹೊಂದಿದ ಆದೇಶದ ದೃಢೀಕೃತ ಪ್ರತಿ, ವಿದ್ಯಾರ್ಹತೆಯ ಬಗ್ಗೆ ದೃಢೀಕೃತ ಪ್ರತಿ, ವೈದ್ಯಕೀಯ ದೃಢೀಕೃತ ಪ್ರತಿ, ವಾಸ ಸ್ಥಳದ ವಿಳಾಸ ಲಗತ್ತಿಸಿ ಅಂಚೆ ಮೂಲಕ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮೇಲೆ ತಿಳಿಸಿದ ಎಲ್ಲಾ ದಾಖಲೆಗಳೊಂದಿಗೆ ಅರ್ಜಿಯನ್ನ ಕೊನೆಯ ದಿನಾಂಕ ಮಾರ್ಚ್ 8, 2018 ರೊಳಗೆ
ಜಿಲ್ಲಾಧಿಕಾರಿಗಳು, ಮಂಡ್ಯ ಜಿಲ್ಲೆ, ಮಂಡ್ಯ ಇಲ್ಲಿಗೆ ಅಂಚೆ ಮೂಲಕ ಕಳುಹಿಸಿ


Click it and Unblock the Notifications











