ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲಾ ಓಂಬುಡ್ಸ್ ಮನ್ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಬಳ್ಳಾರಿ, ಹಾವೇರಿ, ಕಲಬುರಗಿ ಮತ್ತು ಕೋಲಾರದಲ್ಲಿ ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು:
ಸಾರ್ವಜನಿಕ ಆಡಳಿತ
ಕಾನೂನು
ಶೈಕ್ಷಣಿಕ ಕ್ಷೇತ್ರ
ಸಮಾಜ ಸೇವೆ/ಮ್ಯಾನೇಜ್ಮೆಂಟ್
ಈ ಕ್ಷೇತ್ರಗಳಲ್ಲಿ ಕಡೆಯ ಪಕ್ಷ 10 ವರ್ಷಗಳ ಸೇವಾನುಭವ ಹೊಂದಿರಬೇಕು.
ವಯೋಮಿತಿ:
ಗರಿಷ್ಟ 66 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಕೆ:
ಜಿಲ್ಲಾ ಮಟ್ಟದಲ್ಲಿ ಒಂಬುಡ್ಸ್ ಮನ್ ಗಳಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇದ್ದು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂಬಂಧಿಸಿದ ದಾಖಲೆಗಳೊಂದಿಗೆ ಸೆಪ್ಟೆಂಬರ್ 5,2020ರೊಳಗೆ [email protected] ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸುವುದು. ಅಂಚೆ ಹಾಗೂ ಖುದ್ದಾಗಿ ಬರುವಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಅಧಿಕೃತ ವೆಬ್ಸೈಟ್ https://rdpr.karnataka.gov.in/english ಗೆ ಭೇಟಿ ನೀಡಿ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.