ಬೆಂಗಳೂರಿನ ಉತ್ತೇಜನ ಫೌಂಡೇಷನ್ ಕುಕನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೆ.5ರಂದು ಉದ್ಯೋಗ ಮೇಳ ಹಮ್ಮಿಕೊಂಡಿದೆ. ಲಿಖಿತ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಯಲಬುರ್ಗಾ ತಾಲೂಕು ಕುಕನೂರು ಗುದ್ನೆಪ್ಪನಮಠ ಬಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಹಾಗೂ ಅಪ್ರೆಂಟಿಸ್ ತರಬೇತಿಗಾಗಿ ಸಂದರ್ಶನವನ್ನು ನಡೆಸಲಾಗುತ್ತದೆ.
ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕ್, ಫಿಟ್ಟರ್ ಮತ್ತು ವೆಲ್ಡರ್ ವಿಷಯದಲ್ಲಿ ಐಟಿಐ ತರಬೇತಿ ಹೊಂದಿರುವ ಅಭ್ಯರ್ಥಿಗಳು, ಎಸ್ಎಸ್ಎಲ್ಸಿ, ಪಿಯುಸಿ, ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದವರೂ ಕೂಡ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ವಯೋಮಿತಿ 18 ರಿಂದ 24 ವರ್ಷಗಳು ಮಾತ್ರ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಮುಖ್ಯವಾಗಿ ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳನ್ನು ಕೇಂದ್ರೀಕರಿಸಲಾಗಿದೆ.
ತುಮಕೂರು ವೀರಶೈವ ಸಹಕಾರ ಬ್ಯಾಂಕ್ ನಲ್ಲಿ ಖಾಯಂ ನೇಮಕಾತಿ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣಪತ್ರ ಹಾಗೂ ಅಂಕಪಟ್ಟಿಯ ಜೆರಾಕ್ಸ್ ಪ್ರತಿಗಳು ಹಾಗೂ ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗೆ 9449517426 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಕುಕನೂರು ಸರ್ಕಾರಿ ಐಟಿಐ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು/ ಫಲಾನುಭವಿಗಳು ಜಿಲ್ಲಾ/ ತಾಲೂಕ ಮಟ್ಟದ ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.