ರಾಜ್ಯ ಬಾಲಕಾರ್ಮಿಕ ಯೋಜನೆ ಅಡಿಯಲ್ಲಿ ಗೌರವ ಧನದ ಆಧಾರದ ಮೇಲೆ ವಿಜಯಪುರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ 3 ಯೋಜನಾ ನಿರ್ದೇಶಕರು, ಗುಮಾಸ್ತ ಮತ್ತು ಕಛೇರಿ ಜವಾನರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ಎಂ.ಎಸ್.ಡಬ್ಲ್ಯೂ/ಅಭಿವೃದ್ಧಿ ಅಧ್ಯಯನ/ಲಾಭರಹಿತ ಸಂಸ್ಥೆಗಳ ನಿರ್ವಹಣಾಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಕಂಪ್ಯೂಟರ್ ಜ್ಞಾನ, ಬಿ.ಕಾಂ ಪದವಿ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಯೋಜನಾ ನಿರ್ದೇಶಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,965/-ರೂ, ಗುಮಾಸ್ತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,310/-ರೂ ಮತ್ತು ಕಛೇರಿ ಜವಾನರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,648/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಕಂಪ್ಯೂಟರ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://vijayapura.nic.in/en/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಗೆಜೆಟೆಡ್ ಅಧಿಕಾರಿಗಳಿಂದ ಧೃಡೀಕೃತ ಎಲ್ಲಾ ದಾಖಲಾತಿಗಳೊಂದಿಗೆ ಖುದ್ದಾಗಿ ಅರ್ಜಿಯನ್ನು ಜಿಲ್ಲಾ ಬಾಲಕಾರ್ಮಿಕ ಯೋಜನಾ ಕಛೇರಿ, ಕಾರ್ಮಿಕ ಇಲಾಖೆ ಅಲ್ಲಾಪುರ ಓಣಿ ಸಿಂದಗಿ ನಾಕಾ, ವಿಜಯಪುರ ಕಚೇರಿಗೆ ಏಪ್ರಿಲ್ 12,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.