ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯ ಮುಖ್ಯ ಆವರಣ ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರಗಳಾದ ನಂದಿಹಳ್ಳಿ, ಕೊಪ್ಪಳ ಹಾಗೂ ಯಲಬುರ್ಗಾದಲ್ಲಿರುವ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು 105 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ:
ಹುದ್ದೆಗಳಿಗನುಸಾರ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪ.ಜಾ/ಪ.ಪಂ, ಪ್ರವರ್ಗ-01ರ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯನ್ನು ಅಧಿಕೃತ ವೆಬ್ಸೈಟ್ http://vskub.ac.in/ ಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 21,2020ರೊಳಗೆ ವಿಶ್ವವಿದ್ಯಾಲಯದ ಮುಖ್ಯ ಆವರಣ, ಬಳ್ಳಾರಿಯಲ್ಲಿ ವಿಭಾಗದ ಮುಖ್ಯಸ್ಥರ ಕಚೇರಿಗೆ ಖುದ್ದಾಗಿ / ರಿಜಿಸ್ಟರ್ಡ್ ಅಂಚೆ ಮುಖಾಂತರ ಸಲ್ಲಿಸತಕ್ಕದ್ದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ