ಬಿಜೆಪಿ ಹಿರಿಯ ನಾಯಕ, ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ನಿಧನ ಹಿನ್ನೆಲೆ ರಾಜ್ಯ ಸರ್ಕಾರ ಇಂದು (ಸೋಮವಾರ) ಕರ್ನಾಟಕದಾದ್ಯಂತ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಕ್ಯಾನ್ಸರ್ ನಿಂದಾಗಿ ಕಳೆದ ಕೆಲವು ದಿನಗಳಿಂದ ನಗರದ ಖಾಸಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಅನಂತ್ ಕುಮಾರ್ ಇಂದು ಬೆಳಗ್ಗೆ 2 ಗಂಟೆಗೆ ನಿಧನಹೊಂದಿದ್ದರು. ಈ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಶಾಲಾ -ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿದೆ. ಹಾಗೂ ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗುವುದು ಹಾಗೂ ನಾಳೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿದುಬಂದಿದೆ.
ಶ್ವಾಸ ಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸಚಿವ ಅನಂತ್ ಕುಮಾರ್ ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನು ಅನಂತ್ ಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
For Quick Alerts
For Daily Alerts
English summary
Union Parliamentary Affairs Minister Ananth Kumar breathed his last in Bengaluru today at 2 am. He passed away following complications of cancer. As a mark of respect Karnataka State today declared Holiday for All schools and colleges in Karnataka. A three day state mourning has also been announced.
Story first published: Monday, November 12, 2018, 12:42 [IST]