ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕ ಪಡೆದವರಿಗೆ ವಿದ್ಯಾರ್ಥಿವೇತನ

2016-17ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ. ಯಲ್ಲಿ ವ್ಯಾಸಂಗ ಮಾಡಿ 2017ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಎಸ್ ಎಸ್ ಎಲ್ ಸಿ/ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆನ್-ಲೈನ್ ಮೂಲಕ ಆಹ್ವಾನಿಸಲಾಗಿದೆ.

2016-17ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ. ಯಲ್ಲಿ ವ್ಯಾಸಂಗ ಮಾಡಿ ಮಾರ್ಚ್ ಮತ್ತು ಏಪ್ರಿಲ್ 2017ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಡಿ.ದೇವರಾಜ ಅರಸು ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವೇತನ ಪಡೆಯಲು ವಿದ್ಯಾರ್ಥಿಗೆ ನಿಗದಿಪಡಿಸಿರುವ ಅರ್ಹತೆಗಳು

  • ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿರಬೇಕು.
  • ಸರ್ಕಾರಿ/ಮಾನ್ಯತೆ ಪಡೆದ ಅನುದಾನಿತ/ಅನುದಾನ ರಹಿತ ಶಾಲೆ/ಕಾಲೇಜುಗಳಲ್ಲಿ (ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ) ವ್ಯಾಸಂಗ ಮಾಡಿರಬೇಕು.
  • ಸಮಾನ ಕೋರ್ಸ್ ಗಳಿಗೆ ಸಂಬಂಧಿಸದಂತೆ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಈ ಸೌಲಭ್ಯವನ್ನು ನೀಡಲಾಗುವುದು.

ವಿದ್ಯಾರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ

  • ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.2.5 ಲಕ್ಷ.
  • ವರ್ಗ-2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ ರೂ.1 ಲಕ್ಷ.

ಪ್ರತಿಭಾ ಪುರಸ್ಕಾರದ ಮೊತ್ತ

  • ಎಸ್ ಎಸ್ ಎಲ್ ಸಿ ರೂ.10000/-
  • ದ್ವಿತೀಯ ಪಿಯುಸಿ ರೂ.15000/-

ಅರ್ಜಿ ಸಲ್ಲಿಕೆ ಹಾಗೂ ಮಂಜೂರಾತಿ ವಿಧಾನ

ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕು. ಬೇರೆ ಯಾವುದೇ ರೀತಿಯ ಅರ್ಜಿ/ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವಾಗ ಅಪ್-ಲೋಡ್ ಮಾಡಬೇಕಾದ ದಾಖಲೆಗಳು

  • ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ
  • ನಿಗದಿತ ಅಂಕಪಟ್ಟಿಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್ ಪ್ರತಿ ಹಾಗೂ ವಿದ್ಯಾರ್ಥಿಯ ಹೆಸರಿನಲ್ಲಿರುವ ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪುಟ (ಬ್ಯಾಂಕ್ ಹೆಸರು, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್ ಶಾಖೆ ಮತ್ತು ಐ.ಎಫ್.ಎಸ್.ಸಿ. ಕೋಡ್ ಮಾಹಿತಿ) ಗಳನ್ನು ಪ್ರತ್ಯೇಕವಾಗಿ ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಬೇಕು.

ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯ ಪ್ರತಿ, ಅಪ್ ಲೋಡ್ ಮಾಡಿರುವ ದಾಖಲೆಗಳ ದೃಢೀಕೃತ ಪ್ರತಿಗಳನ್ನು ವಿದ್ಯಾರ್ಥಿ ಎಸ್.ಎಸ್.ಎಲ್.ಸಿ./ ದ್ವಿತೀಯ ಪಿ.ಯು.ಸಿ. ಅಧ್ಯಯನ ಮಾಡಿರುವ ಶಾಲೆ/ಕಾಲೇಜುಗಳಿರುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಿ, ಕೊನೆಯ ದಿನಾಂಕ: 01.08.2017 ರೊಳಗೆ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳುವುದು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ವಿದ್ಯಾರ್ಥಿಗಳು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿಯನ್ನು ಆನ್ ಲೈನ್ ಮೂಲಕ ಅಪ್ ಡೇಟ್ ಮಾಡುವುದು

ಪ್ರಮುಖ ದಿನಾಂಕಗಳು

ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-07-2017
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-08-2017

ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ವಿಳಾಸ backwardclasses.kar.nic.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Online applications are invited under D.Devaraja urs scholarship scheme for backward class merit students who got 90 percent in SSLC and Second PUC examination 2017
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X