2019ನೇ ಸಾಲಿನ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ "ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ" ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸರಾಸರಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆ ಪ್ರಕ್ರಿಯೆ:
ಅನುದಾನ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಮತ್ತು ಮೀಸಲಾತಿ ಅನ್ವಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಹತೆಗಳು:
* ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಠ 7 ವರ್ಷ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರತಕ್ಕದ್ದು.
* ವಿದ್ಯಾರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು.
* ಸರ್ಕಾರಿ/ಮಾನ್ಯತೆ ಪಡೆದ ಅನುದಾನಿತ/ಅನುದಾನ ರಹಿತ ಕಾಲೇಜು/ವಿಶ್ವವಿದ್ಯಾಲಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗವನ್ನು ಕರ್ನಾಟಕ ರಾಜ್ಯದಲ್ಲಿಯೇ ಮಾಡಿರಬೇಕು.
* ಸಮಾನ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಅರ್ಹತೆಯನ್ನಾಧರಿಸಿ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಈ ಸೌಲಭ್ಯವನ್ನು ನೀಡಲಾಗುವುದು.
* ವಿದ್ಯಾರ್ಥಿಯು ಸೇರಿದಂತೆ ಕುಟಂಬದ ಒಟ್ಟು ವಾರ್ಷಿಕ ಆದಾಯಮಿತಿ: ಪ್ರ-1-ರೂ. 2.50ಲಕ್ಷ, ಪ್ರ-2ಎ,3ಎ,3 ಬಿ- ರೂ.1.00ಲಕ್ಷ
ಪುರಸ್ಕಾರ ಮೊತ್ತದ ವಿವರ:
ಅರ್ಜಿ ಸಲ್ಲಿಕೆ:
ಅರ್ಜಿಗಳನ್ನು ಅನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆನ್-ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.11.2019ರ ಸಂಜೆ 5:00 ಗಂಟೆ
ಎಲ್ಲಾ ದಾಖಲೆಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ: 2-12-2019ರ ಸಂಜೆ 5:30ಗಂಟೆ
ಸಹಾಯವಾಣಿ ಸಂಖ್ಯೆ: 8050770004
ಅಧಿಕೃತ ವೆಬ್ಸೈಟ್: http://backwardclasses.kar.nic.in/BCWDHome.aspx
ಇ-ಮೇಲ್: [email protected]
ಅಭ್ಯರ್ಥಿಗಳು ಈ ಬಗೆಗೆ ನೀಡಲಾಗಿರುವ ಪ್ರಕಟಣೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ