ಪದವಿ ಮತ್ತು ತಾಂತ್ರಿಕ ಕೋರ್ಸ್ಗಳನ್ನು ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮವನ್ನು ನ.18ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಡಿ.ಎಲ್, ಡಿ.ಎಡ್ ಕೋರ್ಸ್: ಸ್ವಯಂ ವೆಬ್ಸೈಟ್ ಬಳಸಲು ಸೂಚನೆ
ನ.18ರಂದು ದಾವಣಗೆರೆಯ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳಿಗೆ ಲ್ಯಾಪ್ಟಾಪ್ ವಿತರಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲು ಇ-ಕಂಟೆಂಟ್ ತುಂಬಿಸಿದ ಲ್ಯಾಪ್ಟಾಪ್ಗಳನ್ನು ನೀಡಲಾಗುತ್ತದೆ. ಲ್ಯಾಪ್ಟಾಪ್ ನೀಡುವ ಸಂಬಂಧ ಈಗಾಗಲೇ ಟೆಂಡರ್ ಪೂರ್ಣಗೊಳಿಸಲಾಗಿದೆ. ಸುಮಾರು 300 ಕೋಟಿ ರೂ. ವೆಚ್ಚದಲ್ಲಿ ಎಲ್ಲಾ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಈ ವರ್ಷ ಲ್ಯಾಪ್ಟಾಪ್ ಉಚಿತವಾಗಿ ನೀಡಲಾಗುತ್ತಿದೆ.
ಎಸ್ಸಿಪಿ, ಟಿಎಸ್ಸಿಪಿ ಯೋಜನೆಯಡಿ ಒದಗಿಸಲಾದ ಅನುದಾನದಲ್ಲಿ ಉಚಿತ ಲ್ಯಾಪ್ಟಾಪ್ಗಳನ್ನು ನೀಡಲಾಗುತ್ತದೆ. ಈ ಯೋಜನೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿರುವ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸಿಗಲಿದೆ.
ಹೆಡ್ ಮಾಸ್ಟರ್ ಸಂಬಳದಿಂದ ನಿರ್ಮಾಣವಾದ ಶಾಲಾ ಶೌಚಾಲಯ
ಈ ಉಚಿತ ಲ್ಯಾಪ್ಟಾಪ್ ವಿತರಣೆ ಸದ್ಯದ ಮಟ್ಟಿಗೆ ಪ.ಜಾ. ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ಸೀಮಿತವಾಗಿರುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಇತರೆ ಎಲ್ಲ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು. 2018-19ನೇ ಸಾಲಿನಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದರು.
ಇನ್ನು ಮುಂದೆ ಶಾಲಾ ರಾಜಾ ದಿನಗಳಲ್ಲೂ ಬಿಸಿಯೂಟ
ರಾಜ್ಯದ ವಿವಿಧ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ಮತ್ತು ಊಟೋಪಚಾರದ ವ್ಯವಸ್ಥೆ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.