
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಪರೀಕ್ಷೆಯ ಫಲಿತಾಂಶವನ್ನು ಸದ್ಯಕ್ಕೆ ನೀಡಬೇಡಿ ಎಂದು ಉಚ್ಚ ನ್ಯಾಯಾಲಯ ವಿಭಾಗೀಯ ಪೀಠದಿಂದ ಮೌಖಿಕ ಆದೇಶ ಹೊರಡಿಸಿದೆ.
ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ರೆಗ್ಯುಲರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪಿಯು ರಿಪೀಟರ್ಸ್ ಅಭ್ಯರ್ಥಿಗಳು ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 17ರ ವರೆಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟ ಮಾಡಬೇಡಿ ಎಂದು ಹೈಕೋರ್ಟ್ ತಿಳಿಸಿದೆ.
ಪಾಸ್ ಮಾಡಿದರೆ ಎಲ್ಲರನ್ನೂ ಪಾಸ್ ಮಾಡಬೇಕಿತ್ತು. ರೆಗ್ಯುಲರ್ ವಿದ್ಯಾರ್ಥಿಗಳನ್ನು ಪಾಸ್ ಮಾಡಿ, ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸುವುದು ಸರಿಯಲ್ಲ. ಈ ಕುರಿತು ಸರ್ಕಾರ ಎಜಿ ಗೆ ಗುರುವಾರದೊಳಗೆ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
For Quick Alerts
For Daily Alerts


Click it and Unblock the Notifications











