ಸಮಾಜ ಕಲ್ಯಾಣ ಆಯುಕ್ತಾಲಯ ಪರಿಶಿಷ್ಟ ಜಾತಿ ಮತ್ತು ಜನಾಂಗಕ್ಕೆ ಸೇರಿದ ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2019 ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಹಾಗೂ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಜುಲೈ 31,2019 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.ವಿದ್ಯಾರ್ಥಿಗಳು ಈ ಬಗೆಗೆ ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ನಿಂದ ಪಡೆಯಬಹುದು.
ಅರ್ಜಿ ಹಾಕಲು ಅರ್ಹತೆಗಳು ಏನಿರಬೇಕು:
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು
* ಕರ್ನಾಟಕ ರಾಜ್ಯದಲ್ಲಿ ಶಾಶ್ವತವಾಗಿ ನೆಲೆಸಿದವರಾಗಿರಬೇಕು
* ಎಸ್ಎಸ್ಎಲ್ಸಿ 2019ರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
* ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನಿಷ್ಟ ಶೇ 60%ರಷ್ಟು ಅಂಕಗಳನ್ನು ಪಡೆದಿರಬೇಕು
ಅರ್ಜಿ ಹಾಕುವುದು ಹೇಗೆ:
ಪರಿಶಿಷ್ಟ ಜಾತಿ ಜನಾಂಗ ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕು. ಬೇರೆ ಯಾವುದೇ ರೀತಿಯ ಅರ್ಜಿ/ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
ವಿದ್ಯಾರ್ಥಿಗಳು ಕೆಳಗೆ ನೀಡಲಾಗಿರು ಸ್ಟೆಪ್ಸ್ ಅನ್ನು ಫಾಲೋ ಮಾಡುವ ಮೂಲಕ ಅರ್ಜಿ ಹಾಕಬಹುದು.
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಸಮಾಜ ಕಲ್ಯಾಣ ಆಯುಕ್ತಾಲಯದ ಅಧಿಕೃತ ವೆಬ್ಸೈಟ್ https://sw.kar.nic.in/indexKan.aspx ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್ನಲ್ಲಿ "SSLC Prize Money / ಎಸ್.ಎಸ್.ಎಲ್.ಸಿ ಪ್ರೊತ್ಸಾಹಧನ" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ಎಸ್.ಎಸ್.ಎಲ್.ಸಿ ಬೋರ್ಡ್ ಸೆಲೆಕ್ಟ್ ಮಾಡಿ , ನಿಮ್ಮ ಜಾತಿ ಸೆಲೆಕ್ಟ್ ಮಾಡಿ ಮತ್ತು ನಿಮ್ಮ ಎಸ್.ಎಸ್.ಎಲ್.ಸಿ ರಿಜಿಸ್ಟ್ರೇಶನ್ ನಂಬರ್ ಅನ್ನು ಟೈಪ್ ಮಾಡಿ ಲಾಗಿನ್ ಆಗಿ
ಸ್ಟೆಪ್ 4: ಲಾಗಿನ್ ಆದ ಬಳಿಕ ಅರ್ಜಿಯನ್ನು ಭರ್ತಿ ಮಾಡಿ
ಸ್ಟೆಪ್ 5: ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
ಸ್ಟೆಪ್ 6: ಎಲ್ಲಾ ಪೂರ್ಣಗೊಂಡ ಬಳಿಕ ಸಬ್ಮಿಟ್ ಮಾಡಿ
ಅರ್ಜಿ ಸಲ್ಲಿಸುವಾಗ ಅಪ್-ಲೋಡ್ ಮಾಡಬೇಕಾದ ದಾಖಲೆಗಳು:
* ಎಸ್.ಎಸ್.ಎಲ್.ಸಿ ರಿಜಿಸ್ಟ್ರೇಶನ್ ನಂಬರ್
* ಆಧಾರ್ ನಂಬರ್ ಮತ್ತು ಆಧಾರ್ ಕಾರ್ಡಿನಲ್ಲಿರುವಂತೆಯೇ ನಿಮ್ಮ ಹೆಸರನ್ನು ನಮೂದಿಸಬೇಕು
* ಜಾತಿ ಪ್ರಮಾಣ ಪತ್ರದಲ್ಲಿರುವ ಆರ್ಡಿ ನಂಬರ್
* ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ ನಿಗದಿತ
* ಎಸ್.ಎಸ್.ಎಲ್.ಸಿ ಅಂಕ ಪಟ್ಟಿ ಸ್ಕ್ಯಾನ್ ಮಾಡಿ
* ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ವಿವರ