ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸಕ್ತ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಹೊಸ ವೇಳಾಪಟ್ಟಿಯ ಅನುಸಾರ ಶಾಲಾ ವಿದ್ಯಾರ್ಥಿಗಳಿಗೆ ಜೂನ್ 14ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯ ಅನುಸಾರ ಶಾಲೆಗಳನ್ನು ಜೂನ್ 14ರ ವರೆಗೆ ಮುಚ್ಚಲಾಗಿರುತ್ತದೆ. ಹೊಸ ಶೈಕ್ಷಣಿಕ ವರ್ಷವು ಜೂನ್ 15 ರಿಂದ ಪ್ರಾರಂಭವಾಗಲಿದೆ. ಈಗಾಗಲೇ ನಿಗದಿಯಾಗಿರುವಂತೆ ಎಸ್ಎಸ್ಎಲ್ಸಿ ಪರೀಕ್ಷೆಗಳು ಜೂನ್ 21 ರಿಂದ ನಡೆಯಲಿವೆ.
ಪ್ರೌಢಶಾಲಾ ಶಿಕ್ಷಕರು ಹತ್ತನೇ ತರಗತಿ ಬೋರ್ಡ್ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಜೂನ್ 1 ರಿಂದ ಜೂನ್ 14ರ ವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲಿದ್ದಾರೆ. ಇನ್ನು ಪ್ರೌಢಶಾಲೆಯ ಶಿಕ್ಷಕರಿಗೆ ಮೇ 31,2021ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸಲಾಗಿದೆ.
For Quick Alerts
For Daily Alerts
English summary
Karnataka government revised academic calender and announced summer vacation for school kids till june 14.
Story first published: Thursday, May 6, 2021, 14:15 [IST]