ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಶಾಲೆಗಳು ತಡವಾಗಿ ಆರಂಭವಾದ ಕಾರಣ ರಾಜ್ಯ ಸರ್ಕಾರ ಮಕ್ಕಳಿಗೆ ದಸರಾ ರಜೆಯನ್ನು ರದ್ದು ಮಾಡಿದೆ. ಈ ಅವಧಿಯಲ್ಲಿ ಈಗಾಗಲೇ ನಡೆಸುತ್ತಿರುವ 'ವಿದ್ಯಾಗಮ' ಕಲಿಕಾ ಕಾರ್ಯಕ್ರಮವನ್ನು ಮುಂದುವರೆಸಲು ಸೂಚನೆ ನೀಡಿದೆ.
ಪ್ರತಿ ವರ್ಷ ಅಕ್ಟೋಬರ್ 3 ರಿಂದ ಅಕ್ಟೋಬರ್ 26 ರವರೆಗೆ ಮಕ್ಕಳಿಗೆ ದಸರಾ ರಜೆಯನ್ನು ನೀಡಲಾಗುತ್ತಿತ್ತು. ಆದರೆ ಈ ಭಾರಿ ಕೊರೋನಾ ಕಾರಣದಿಂದಾಗಿ ರಜೆಯನ್ನು ರದ್ದು ಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ಪ್ರಾರಂಭ ಕುರಿತು ಪ್ರಾಥಮಿಕ ಶಾಲೆ, ಪ್ರೌಢಶಾಲೆ ಶಿಕ್ಷಕರ ಸಂಘಟನೆಗಳ ಹಾಗೂ ಪದವಿ ಪೂರ್ವ ಉಪನ್ಯಾಸಕರ ಸಂಘಗಳ ಜಿಲ್ಲಾ ಪ್ರತಿನಿಧಿಗಳೊಂದಿಗೆ ಗುರುವಾರ ಸಂವಾದ ನಡೆಸಿ ಮಾತನಾಡಿದ ಅವರು ಸರ್ಕಾರವು ಮಕ್ಕಳ ಆರೋಗ್ಯಕ್ಕೆ ತೊಂದರೆಯಾಗುವಂತಹ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
For Quick Alerts
For Daily Alerts
English summary
Karnataka government cancelled dasara holidays for schools.
Story first published: Saturday, October 3, 2020, 20:26 [IST]