ರಾಜ್ಯದಲ್ಲಿ ಎಲ್ಲಾ ಖಾಸಗಿ ಶಾಲೆಗಳ ಭೋಧನಾ ಶುಲ್ಕವನ್ನು ಶೇ.30%ರಷ್ಟು ಕಡಿತಗೊಳಿಸಲು ಸರ್ಕಾರ ನಿರ್ಧರಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಪೋಷಕರಿಗೆ ತಲೆ ನೋವಾಗಿದ್ದ ಶಾಲಾ ಶುಲ್ಕದ ಭಾರವನ್ನು ಕಡಿಮೆ ಮಾಡುವ ಪ್ರಯತ್ನವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಡಿದ್ದಾರೆ.
''ಎಲ್ಲಾ ಶಾಲಾ ಆಡಳಿತ ಮಂಡಳಿಗಳು ನಿಗದಿತ ಬೋಧನಾ ಶುಲ್ಕವನ್ನು ಶೇ 30ರಷ್ಟು ಕಡಿತಗೊಳಿಸಬೇಕು, ಶೇ 70ರಷ್ಟು ಮಾತ್ರ ಶುಲ್ಕ ಪಡೆಯಲು ಸೂಚಿಸಲಾಗಿದೆ'' ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಶಾಲೆಗಳಲ್ಲಿ ಕೂಡ ಆರ್ಥಿಕ ಸಂಕಷ್ಟದಿಂದಾಗಿ ಶಿಕ್ಷಕರಿಗೆ ಸರಿಯಾಗಿ ಸಂಬಳ ನೀಡಿರುವುದಿಲ್ಲ. ಹೀಗಾಗಿ ಶೇ.70%ರಷ್ಟು ಶುಲ್ಕವನ್ನು ಮಾತ್ರ ಪಡೆಯಲು ಸೂಚಿಸಲಾಗಿದೆ. ಈಗಾಗಲೇ ಕೆಲವು ಶಾಲೆಗಳಲ್ಲಿ ಬೋಧನಾ ಶುಲ್ಕವನ್ನು ಪೂರ್ತಿಯಾಗಿ ಪಾವತಿಸಿದ್ದರೆ ಶುಲ್ಕ ಕಡಿತ ನಿಯಮ ಪಾಲಿಸಲು ತಿಳಿಸಿದ್ದಾರೆ. ಹಾಗೂ ಇತರೆ ಯಾವುದೇ ರೀತಿಯ ಶುಲ್ಕ ಹೆಚ್ಚಳ ಮಾಡಬಾರದೆಂದು ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
For Quick Alerts
For Daily Alerts