ರಾಜ್ಯದೆಲ್ಲೆಡೆ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ ೩೦ ಮತ್ತು ೩೧ರಂದು ನಿಗದಿಯಾಗಿರುವ ಸಿಇಟಿ ಪರೀಕ್ಷೆಯನ್ನು ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಕುರಿತು ನಾಳೆ ಇತ್ಯರ್ಥ ಆಗುವ ಸಾಧ್ಯತೆ ಇದೆ.
ರಾಜ್ಯದೆಲ್ಲೆಡೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಕಂಟೈನ್ಮೆಂಟ್ ಜೋನ್ ಗಳಲ್ಲಿರುವ ವಿದ್ಯಾರ್ಥಿಗಳು ಮತ್ತು ಹೊರರಾಜ್ಯಗಳಿಂದಲೂ ವಿದ್ಯಾರ್ಥಿಗಳು ಬಂದು ಸಿಇಟಿ ಪರೀಕ್ಷೆ ಬರೆಯುತ್ತಾರೆ. ಕೊರೊನಾ ಎಸ್ಓಪಿಯ ಅನುಸಾರ ಕಂಟೈನ್ಮೆಂಟ್ ಜೋನ್ ನಲ್ಲಿರುವವರು ಹೊರಗೆ ಹೋಗುವಂತಿಲ್ಲ. ಬೆಂಗಳೂರಿನಲ್ಲೇ ಮೂರು ಸಾವಿರದಷ್ಟು ಕಂಟೈನ್ಮೆಂಟ್ ಜೋನ್ ಗಳಿದೆ. ಹಾಗಾಗಿ ಅಲ್ಲಿನ ವಿದ್ಯಾರ್ಥಿಗಳು ಎಲ್ಲಿ ಹೋಗುತ್ತಾರೆ? ಅವರು ಪರೀಕ್ಷೆಯಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದಿರುವ ಹೈಕೋರ್ಟ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
For Quick Alerts
For Daily Alerts