
ರಾಜ್ಯದಲ್ಲಿ ಜುಲೈ 19, 22ರಂದು ನಿಗದಿಯಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಕುರಿತು ಪ್ರಶ್ನಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾ ಮಾಡಿದೆ.
ರಾಜ್ಯದಲ್ಲಿ ಶೇ.1.48ರಷ್ಟು ಮಾತ್ರ ಕೊರೊನಾ ಪಾಸಿಟಿವಿಟಿ ವರದಿ ಇದೆ ಹಾಗಾಗಿ ಮಾರ್ಗಸೂಚಿ ಪಾಲಿಸುವ ಮೂಲಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ವಿದ್ಯಾರ್ಥಿಗಳನ್ನು ಬಲವಂತವಾಗಿ ಪರೀಕ್ಷೆ ಬರೆಸಬಾರದು. ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯದು. ವಿದ್ಯಾರ್ಥಿಗಳು, ಶಿಕ್ಷಕರ ಸುರಕ್ಷತೆಗೆ ಕ್ರಮ ಕೈಗೊಳ್ಳುವುದು ಒಳಿತು. ಸರ್ಕಾರ ರೂಪಿಸಿದ ಮಾರ್ಗಸೂಚಿ ಪಾಲಿಸುವ ಮೂಲಕ ಪರೀಕ್ಷೆ ಪರೀಕ್ಷೆ ನಡೆಸಲಾಗುವುದು ಎಂದು ನ್ಯಾ.ಬಿ.ವಿ.ನಾಗರತ್ನ, ನ್ಯಾ. ಹಂಚಟೆ ಸಂಜೀವ್ ಕುಮಾರ್ ಪೀಠ ಆದೇಶ ಹೊರಡಿಸಿದೆ.
ಎಸ್ಎಸ್ಎಲ್ಸಿಪರೀಕ್ಷೆಗೆ ಪರ್ಯಾಯ ಮೌಲ್ಯಮಾಪನ ಮಾನದಂಡಗಳನ್ನು ಕೋರಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿತು. ವರದಿಯ ಪ್ರಕಾರ, ಜುಲೈ 19, 22 ರಂದು ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.


Click it and Unblock the Notifications











