ಕರ್ನಾಟಕ ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯಬೇಕು ಎಂಬ ಕುರಿತು ಹೈಕೋರ್ಟ್ ಇಂದು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು ಮಾಡಲಾಗಿದೆ, ಆದರೆ ಪುನರಾವರ್ತಿತ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಹೇಳಿತ್ತು.
ಒಟ್ಟಾರೆ 93 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, ರಿಪೀಟರ್ಸ್ ಗೆ ಮಾತ್ರ ಈ ರೀತಿಯ ನಿರ್ಧಾರ ಸರಿಯಲ್ಲ ಎಂದು ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಪಾಸ್ ಮಾಡಿದರೆ ಎಲ್ಲರನ್ನೂ ಮಾಡಬೇಕು, ಹೀಗೆ ಮಾಡುವುದು ತಾರತಮ್ಯ ಮಾಡಿದಂತಾಗುತ್ತದೆ ಮತ್ತು ಗುರುವಾರದೊಳಗೆ ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಹಾಗೂ ಅಲ್ಲಿಯವರೆಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಘೋಷಿಸುವಂತಿಲ್ಲ ಎಂದು ಹೈಕೋರ್ಟ್ ಸೂಚನೆ ನೀಡಿತ್ತು.
For Quick Alerts
For Daily Alerts