ಕೊರೋನಾ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮೇ 4ರ ವರೆಗೆ ವೀಕೆಂಡ್ ಕರ್ಫ್ಯೂ ಮತ್ತು ರಾತ್ರಿ ಕರ್ಫ್ಯೂ ಅನ್ನು ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಮೊದಲ ಸೆಮಿಸ್ಟರ್ ನ ಉಳಿದ ಇಂಜಿನಿಯರಿಂಗ್ ಪರೀಕ್ಷೆಗಳನ್ನು ಮುಂದುವರಿಸಲಾಗುವುದು ಎಂದು ಹೇಳಿದೆ.
ಈಗಾಗಲೇ ನಿಗದಿಯಾಗಿರುವ ದಿನಾಂಕಗಳಲ್ಲಿ ಮೊದಲ ಸೆಮಿಸ್ಟರ್ ನ ಉಳಿದ ಪರೀಕ್ಷೆಗಳನ್ನು ಹಲವು ಮುಂಜಾಗ್ರತಾ ಕ್ರಮಗಳೊಂದಿಗೆ ನಡೆಸಲಾಗುವುದು ಎಂದು ರಿಜಿಸ್ಟ್ರಾರ್ ಪ್ರೊ.ಎ.ಎಸ್ ದೇಶಪಾಂಡೆ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಒಂದು ವೇಳೆ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿ ಪರೀಕ್ಷೆಗೆ ಹಾಜರಾಗದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಮುಂದಿನ ಸೆಮಿಸ್ಟರ್ ನಲ್ಲಿ ಈ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು ಮತ್ತು ಅದನ್ನು ಮೊದಲ ಅಟೆಂಪ್ಟ್ ಎಂದು ಪರಿಗಣಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಭಾರಿ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳು ಸೆಕೆಂಡ್ ಸೆಮಿಸ್ಟರ್ ನ ತರಗತಿಗಳಿಗೆ ಹಾಜರಾಗಬಹುದು ಮತ್ತು ಈ ಅವಕಾಶವನ್ನು ರೆಗ್ಯುಲರ್ ಆಗಿ ಬಿಇ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗಿದೆ ಎಂದು ದೇಶಪಾಂಡೆಯಲ್ಲಿ ಸುತ್ತೋಲೆಯಲ್ಲಿ ಹೇಳಿದ್ದಾರೆ.