
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಇದೀಗ ಪರೀಕ್ಷೆಯ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ವಿಕಾಸಸೌಧದಲ್ಲಿ ಸುರೇಶ್ ಕುಮಾರ್ ನೇತೃತ್ವದಲ್ಲಿ ಹಲವಾರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಎಸ್ಎಸ್ಎಲ್ಸಿ ಪರೀಕ್ಷಾ ದಿನಾಂಕಗಳನ್ನು ಘೋಷಿಸಿದ್ದಾರೆ. ಹಾಗೆಯೇ ದ್ವಿತೀಯ ಪಿಯುಸಿಗೆ ಸಂಬಂಧಿಸಿದಂತೆ ಜುಲೈ ೨ನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. 12 ತಜ್ಞರ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಯಾವುದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಮೌಲ್ಯಮಾಪನ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಒಂದು ವೇಳೆ ವಿದ್ಯಾರ್ಥಿಗೆ ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ಬೇಸರವಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.


Click it and Unblock the Notifications











