Karnataka SSLC Exam 2021: ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾತಿ ಕಡ್ಡಾಯ ಇಲ್ಲ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾತಿ ಕಡ್ಡಾಯ ಇಲ್ಲ

ರಾಜ್ಯದಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ವಿನಾಯಿತಿ ನೀಡಿದೆ. ಶೇ.75 ರಷ್ಟು ಹಾಜರಾತಿ ಇಲ್ಲದಿದ್ದರೂ ಕೂಡ ವಿದ್ಯಾರ್ಥಿಗಳು ಈ ಭಾರಿ ಪರೀಕ್ಷೆಯನ್ನು ಬರೆಯುವ ಅವಕಾಶ ನೀಡಲಾಗುತ್ತಿದೆ.

ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ತಡವಾಗಿ ಪ್ರಾರಂಭಿಸಲಾಗಿದ್ದು, ಶಾಲೆಗೆ ವಿದ್ಯಾರ್ಥಿಗಳನ್ನು ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯು ವಿದ್ಯಾರ್ಥಿಗಳಿಗೆ ಕೆಲ ವಿನಾಯಿತಿಯನ್ನು ನೀಡಿದೆ.

ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿತ್ತು. ಆದರೆ ಈ ಭಾರಿ ಎದುರಾದ ಸಂಕಷ್ಟದ ಪರಿಸ್ಥಿತಿಯಿಂದಾಗಿ ಹಾಜರಾತಿ ಕಡ್ಡಾಯವನ್ನು ರದ್ದು ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka sslc students can write exam if they dont have 75 percent of attendence.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X