
ಸಿಬಿಎಸ್ಇ ಹನ್ನೆರಡನೇ ತರಗತಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡುವಂತೆ ಪೋಷಕರು ಮತ್ತು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನಾಳೆ ಸುದ್ದಿಗೋಷ್ಠಿ ಕರೆದಿದ್ದು, ಪರೀಕ್ಷೆಯ ಕುರಿತು ಮಹತ್ವದ ನಿರ್ಧಾರವನ್ನು ಪ್ರಕಟಿಸುವ ನಿರೀಕ್ಷೆ ಇದೆ.
ಸಿಬಿಎಸ್ಇ ಹನ್ನೆರಡನೇ ತರಗತಿ ಪರೀಕ್ಷೆ ರದ್ದು ಮಾಡಿದ ಬೆನ್ನಲ್ಲೇ ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಗುಜರಾತ್, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಬೋರ್ಡ್ಗಳು ಸಹ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿವೆ. ಇದೀಗ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳು ನಡೆಯುತ್ತವೆಯೋ ಅಥವಾ ಇಲ್ಲವೋ ಎಂಬ ಗೊಂದಲಕ್ಕೆ ನಾಳೆ ತೆರೆಯೆಳೆಯುವ ಸಾಧ್ಯತೆ ಇದೆ.
ಒಟ್ಟಾರೆ ಕುತೂಹಲ ಕೆರಳಿಸಿರುವ ಬೋರ್ಡ್ ಪರೀಕ್ಷೆಗಳ ಕುರಿತು ಸಚಿವ ಸುರೇಶ್ ಸುರೇಶ್ ಕುಮಾರ್ ನಾಳೆ ಸುದ್ದಿಗೋಷ್ಠಿಯಲ್ಲಿ ಏನು ಹೇಳುತ್ತಾರೆ ಎಂದು ಕಾದುನೋಡಬೇಕಿದೆ.


Click it and Unblock the Notifications











