2019-20ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟ ಮಾಡಿದ್ದಾರೆ. ಈ ಬಾರಿ ಜೂನ್ 25 ರಿಂದ ಜುಲೈ 4ರ ವರೆಗೆ ಪರೀಕ್ಷೆ ನಡೆದಿದ್ದು, ಪರೀಕ್ಷೆ ಒಟ್ಟು 8,48,203 ವಿದ್ಯಾರ್ಥಿಗಳು ನೋಂದಾಯಿಸಿದ್ದರು,ಈ ಪೈಕಿ 8,11,050 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡರು.
ಈ ವರ್ಷ 71.80 ಶೇಕಡಾವಾರು ಫಲಿತಾಂಶ ಬಂದಿದೆ. ಕಳೆದ ವರ್ಷ 73.70 ಫಲಿತಾಂಶ ಬಂದಿತ್ತು. 5,82,316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳ ಫಲಿತಾಂಶ ಶೇ. 72.79 ಅಷ್ಟಿದೆ. ಅನುದಾನಿತ ಶಾಲೆಗಳು 70.60, ಶೇ. 82.31, 2,28,734 ಅನುತ್ತೀರ್ಣರಾಗಿದ್ದಾರೆ.
ಈ ಭಾರಿ ಜಿಲ್ಲಾವಾರು ಫಲಿತಾಂಶ ನೋಡುವುದಾದರೆ ಗ್ರೇಡ್ ಮೂಲಕ ಫಲಿತಾಂಶ ಪ್ರಕಟವಾಗಿದೆ. ಚಿಕ್ಕಬಳ್ಳಾಪುರ ಪ್ರಥಮ ಸ್ಥಾನ, ಬೆಂಗಳೂರು ಗ್ರಾಮಾಂತರ ದ್ವಿತೀಯ ಸ್ಥಾನ ಮತ್ತು ಮಧುಗಿರಿ ತೃತೀಯ ಸ್ಥಾನ ಮತ್ತು ಕೊನೆಯ ಸ್ಥಾನವನ್ನು ಯಾದಗಿರಿ ಪಡೆದುಕೊಂಡಿದೆ.
ಜಿಲ್ಲಾವಾರು ಫಲಿತಾಂಶದ ಪಟ್ಟಿ ವೀಕ್ಷಿಸಲು ಮುಂದೆ ನೋಡಿ.