ಕರ್ನಾಟಕ ಲೋಕಸೇವಾ ಆಯೋಗವು ದ್ವಿತೀಯ ದರ್ಜೆ ಸಹಾಯಕರು/ಕಿರಿಯ ಸಹಾಯಕರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಮರು ದಿನಾಂಕವನ್ನು ಪ್ರಕಟ ಮಾಡಿದೆ.
ಕೆಪಿಎಸ್ಸಿ ಎಸ್ಡಿಎ ಪರೀಕ್ಷೆಯನ್ನು ಕೊರೋನಾ ಕಾರಣದಿಂದಾಗಿ ಮುಂದೂಡಲಾಗಿತ್ತು. ಇದೀಗ ಪರೀಕ್ಷೆಯ ಮರು ದಿನಾಂಕವನ್ನು ಪ್ರಕಟಿಸಿದ್ದು, ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10 ರಿಂದ 11ರ ತನಕ ಕಡ್ಡಾಯ ಕನ್ನಡ ಪರೀಕ್ಷೆ ಮತ್ತು ಸೆಪ್ಟೆಂಬರ್ 19ರಂದು ಬೆಳಿಗ್ಗೆ 10 ರಿಂದ 11:30ರ ತನಕ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್ಸಿ ಪ್ರಕಟಣೆ ಹೊರಡಿಸಿದೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ಹಾಗೂ ಹೈದರಾಬಾದ್-ಕರ್ನಾಟಕ ವೃಂದದ ಕಿರಿಯ ಸಹಾಯಕರ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಕೆಪಿಎಸ್ಸಿ ಅಧಿಸೂಚನೆಯನ್ನು ಹೊರಡಿಸಿತ್ತು. ಇದೀಗ ಪರೀಕ್ಷೆಯ ಮರು ದಿನಾಂಕವನ್ನು ಘೋಷಿಸಿದೆ.
For Quick Alerts
For Daily Alerts