ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ,ಎಸ್,ಇ,ಟಿ) ಯನ್ನು ಸೆಪ್ಟೆಂಬರ್ 27,2020 (ಭಾನುವಾರ) ರಂದು ನಡೆಸುತ್ತಿದೆ. ಆದರೆ ಕೆಲವು ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆದಿರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪ್ರವೇಶ ಪತ್ರವನ್ನು ಸೆಪ್ಟೆಂಬರ್ 23,2020ರಂದು ಮಧ್ಯರಾತ್ರಿ 12 ಗಂಟೆವರೆಗೆ ಅಧಿಕೃತ ವೆಬ್ಸೈಟ್ನಲ್ಲಿ ಪಡೆಯಬಹುದಾಗಿದೆ.
ಈಗಾಗಲೇ ಪ್ರವೇಶ ಪತ್ರವನ್ನು (ಏಪ್ರಿಲ್ 12,2020 ಮತ್ತು ಜೂನ್ 21,2020) ಪಡೆದಿರುವ ಅಭ್ಯರ್ಥಿಗಳು ಮತ್ತೇ ಪ್ರವೇಶ ಪತ್ರವನ್ನು ಪಡೆಯುವ ಅವವಶ್ಯಕತೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆಸೆಟ್ 2020 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್ಸೈಟ್ ನಲ್ಲಿ ಆಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ನೋಡಬೇಕಾಗಿ ಪ್ರಕಟಣೆಯಲ್ಲಿ ಸೂಚಿಸಿದೆ.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts