2017-18ನೇ ಸಾಲಿನ ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲು ಎನ್.ಎಸ್.ಪಿ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರೌಢ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ಆಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ವಿದ್ಯಾರ್ಥಿವೇತನ ನೀಡಲಾಗುವುದು.
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ತಮ್ಮ ವ್ಯಾಸಂಗವನ್ನು ಮುಂದುವರೆಸುವಂತೆ, ಪ್ರೋತ್ಸಾಹಿಸಲು ಹಾಗೂ ವಿದ್ಯಾಭ್ಯಾಸದ ನಡುವೆ ಶಾಲೆ ಬಿಡುವುದನ್ನು ತಪ್ಪಿಸಲು ಮತ್ತು ಪಾಲಕರಿಗೆ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಉತ್ತೇಜಿಸಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲಾಗುತ್ತದೆ.
ಅರ್ಹತಾ ಮಾನದಂಡಗಳು
ಪೋಷಕರ ವಾರ್ಷಿಕ ವರಮಾನ ರೂ.2,00,000ಗಳ ಮಿತಿಯೊಳಗಿರಬೇಕು, ರಾಜ್ಯ ಸರ್ಕಾರದ ಮೀಸಲಾತಿ ನೀತಿಗಳು ಅನ್ವಯವಾಗುತ್ತದೆ
ವಿದ್ಯಾರ್ಥಿಗಳು ಸರ್ಕಾರದ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಸರ್ಕಾರದ ಅನುದಾನಿತ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರಬೇಕು.
ಬೇರೆ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
ವಿದ್ಯಾರ್ಥಿ ಯೋಜನೆ ವಿವರ
- ಡೇ ಸ್ಕಾಲರ್ಸ್: ಮಾಹೆಯಾನ ರೂ. 150 ರಂತೆ 10 ತಿಂಗಳಿಗೆ
- ಹಾಸ್ಟೆಲರ್ಸ್.ಮಾಹೆಯಾನ ರೂ. 350 ರಂತೆ 10 ತಿಂಗಳಿಗೆ
ಅರ್ಜಿ ಸಲ್ಲಿಕೆ
ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಸೂಕ್ತ ಮಾಹಿತಿ ನೀಡಿ ನೋಂದಣಿ ಮಾಡಿಕೊಳ್ಳಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2017
ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ