ಶಾಲೆಗಳು ಆರಂಭಗೊಳ್ಳುವ ಬಗ್ಗೆ ಯಾವುದೇ ಉಹಾಪೋಹಗಳಿಗೆ ಪೋಷಕರು ಕಿವಿಗೊಡಬಾರದು ಎಂದು ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಕಟಣೆ ಹೊರಡಿಸಿದ್ದಾರೆ.
ಕೋವಿಡ್ -19 ಸೋಂಕು ಹರಡುತ್ತಿರುವ ಸಂದರ್ಭಧಲ್ಲಿ ಶಾಲೆಗಳನ್ನು ಪ್ರಾರಂಭಿಸುವುದರ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನಗಳನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೇ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರೂ ಸಹಿತ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ ಎಲ್ಲ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ ಭಾದಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ತಿಳಿಸಿದ್ದಾರೆ.
ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಉಹಾಪೋಹ ಮತ್ತು ವದಂತಿಗಳಿಗೆ ಕಿವಿಗೊಡಬಾರದೆಂದು ಪೋಷಕರಿಗೆ ಮನವಿ ಮಾಡುತ್ತೇನೆ ಮತ್ತು ಈ ಬಗ್ಗೆ ಜಾಗೃತಿ ಮೂಡಿಸಲು ಮಾಧ್ಯಮಗಳಲ್ಲಿ ಕೋರುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.