ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ರಾಜ್ಯದಲ್ಲಿ ಈ ಬಾರಿ ಶೇ.67.87 ರಷ್ಟು ಫಲಿತಾಂಶ ಕಂಡುಬಂದಿದೆ. ಕಳೆದ ಆರು ವರ್ಷಗಳಲ್ಲಿ ಈ ಬಾರಿಯೇ ಫಲಿತಾಂಶದಲ್ಲಿ ಇಳಿಕೆ ಕಂಡುಬಂದಿದ್ದು, ಕಟ್ಟುನಿಟ್ಟಿನ ಪರೀಕ್ಷಾ ಕ್ರಮವೇ ಕಡಿಮೆ ಫಲಿತಾಂಶಕ್ಕೆ ಕಾರಣ ಎಂದು ಹೇಳಲಾಗಿದೆ.
ಈ ಬಾರಿಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅವಕಾಶ ಕಲ್ಪಿಸಿದ್ದು ಆಸಕ್ತ ವಿದ್ಯಾರ್ಥಿಗಳು ದಿನಾಂಕ 22-05-2017 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಛಾಯಾಪ್ರತಿಗಾಗಿ/ ಮರುಎಣಿಕೆಗಾಗಿ
ಉತ್ತರ ಪತ್ರಿಕೆಯ ಛಾಯಾಪ್ರತಿಗಾಗಿ/ ಮರುಎಣಿಕೆಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-05-2017
ಶುಲ್ಕದ ವಿವರ
ಮರುಎಣಿಕೆ ಒಂದು ವಿಷಯಕ್ಕೆ: ರೂ.150/-
ಛಾಯಾಪ್ರತಿ ಒಂದು ವಿಷಯಕ್ಕೆ: ರೂ.300/-
ಉತ್ತರ ಪತ್ರಿಕೆಯ ಮರುಮೌಲ್ಯಮಾಪನ
ಉತ್ತರ ಪತ್ರಿಕೆಯ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಛಾಯಾಪ್ರತಿ ಸ್ವೀಕರಿಸಿದ 07ದಿನದೊಳಗಾಗಿ ಮಂಡಳಿಗೆ ಸಲ್ಲಿಸುವುದು.
ಶುಲ್ಕದ ವಿವರ
ಮರುಮೌಲ್ಯಮಾಪನ ಒಂದು ವಿಷಯಕ್ಕೆ ರೂ.700/-
ಇತರೆ ಸೂಚನೆ
- 2017 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಮರು ಎಣಿಕೆ, ಛಾಯಾಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿಗಳನ್ನು ಬೆಂಗಳೂರು ಒನ್/ಕರ್ನಾಟಕ ಒನ್ ಮುಖಾಂತರ ಸಲ್ಲಿಸಬಹುದು.
- ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ವ್ಯಾಸಂಗಕ್ಕೆ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮುಂದಿನ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನದ ಫಲಿತಾಂಶಕ್ಕಾಗಿ ಕಾಯಬಾರದು.
- ಮರುಮೌಲ್ಯಮಾಪನದ ಬಗ್ಗೆ ಮರುಮೌಲ್ಯಮಾಪಕರು ತೆಗೆದುಕೊಂಡ ನಿರ್ಧಾರವೇ ಅಂತಿಮ ಇದರ ಬಗ್ಗೆ ಮರುಪರಿಶೀಲನೆ ಅಥವಾ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ.
- ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳು ಮೊದಲು ಉತ್ತೀರ್ಣರಾದ ಎರಡು ವರ್ಷದೊಳಗೆ ಅದೇ ವಿಷಯ/ವಿಷಯಗಳಿಗೆ ಪರೀಕ್ಷೆ ತೆಗೆದುಕೊಳ್ಳಬಹುದು.
- ಯಾವುದೇ ವಿದ್ಯಾರ್ಥಿ ಶಾಲಾ ಅಭ್ಯರ್ಥಿಯಾಗಿ ಪುನಃ ಪರೀಕ್ಷೆಯನ್ನು ತೆಗೆದುಕೊಳ್ಳಲು ಇಚ್ಛಿಸಿದಲ್ಲಿ ಶಾಲೆಗೆ ಮರು ಪ್ರವೇಶ ಪಡೆಯಲು ಅವಕಾಶವಿದೆ.
- ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯಾ ಶಾಲೆಗಳಿಗೆ ಮರುಎಣಿಕೆ ಮತ್ತು ಮರು ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಕಳುಹಿಸಲಾಗುವುದು.
For Quick Alerts
For Daily Alerts