ಎಸ್ಎಸ್ಎಲ್ಸಿ ಪರೀಕ್ಷೆ ರದ್ದಾಗಿರುವ ಬಗ್ಗೆ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ "ಪರೀಕ್ಷೆ ರದ್ದುಮಾಡುವ ಯಾವುದೇ ರೀತಿಯ ನಿರ್ಣಯಗಳನ್ನು ಕೈಗೊಂಡಿರುವುದಿಲ್ಲ, ಪೋಷಕರು ಮತ್ತು ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ಪ್ರಕಟಣೆಗಾಗಿ ಮಾತ್ರ ಕಾಯಬೇಕು. ಅದು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿನ ಈ ಕುರಿತ ಮಾಹಿತಿ ನಂಬಬೇಡಿ" ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕದ ಬಗ್ಗೆ ಮೇ 03, 2020 ರ ನಂತರವೇ ನಿರ್ಣಯ ಕೈಗೊಳ್ಳಲಾಗುತ್ತದೆ. ಅಲ್ಲಿಯವರೆಗೂ ಯಾರು ಸಹ ಸುಳ್ಳು ಸುದ್ದಿ ಹಬ್ಬಿಸಬಾರದು. ಹಾಗೆಯೇ ಸುಳ್ಳು ಸುದ್ದಿ ನಂಬಿ ಆತಂಕ ಪಡಬಾರದು ಎಂದು ಸಲಹೆ ನೀಡಿದ್ದಾರೆ.
ಪರೀಕ್ಷೆ ರದ್ದಾಗಿದೆಯೇ ಈ ಬಗ್ಗೆ ಸುದ್ದಿ ಹರಡುತ್ತಿವೆ ಎಂದು ಅನೇಕ ಪೋಷಕರು ಮತ್ತು ವಿದ್ಯಾರ್ಥಿಗಳು ಶಿಕ್ಷಣ ಸಚಿವರಿಗೆ ಕರೆ ಮಾಡಿ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ವಿದ್ಯಾರ್ಥಿಗಳು ಶ್ರಮ ಪಟ್ಟು ಅಧ್ಯಯನ ಮಾಡಿದ್ದಾರೆ. ಅವರ ಪರಿಶ್ರಮ ವ್ಯರ್ಥವಾಗಬರದು ಹಾಗಾಗಿ ಈ ಲಾಕ್ಡೌನ್ ಸಮಯದಲ್ಲಿ ಇನ್ನಷ್ಟು ಅಧ್ಯಯನ ನಡೆಸಲಿ. ಮೇ.3ರ ನಂತರವೇ ಪರೀಕ್ಷಾ ದಿನಾಂಕಗಳನ್ನು ನಿಗಧಿಪಡಿಸಲಾಗುವುದು ಎಂದು ಹೇಳಿದ್ದಾರೆ.